ಬೆಂಗಳೂರು, (ಜೂನ್ 16): ಚುನಾವಣೆ ನಡೆದ ಸಂದರ್ಭಗಳಲ್ಲಿ ಯಾವುದೇ ಒಂದು ಪಕ್ಷಕ್ಕೆ ಬಹುಮತ ಬರದೇ ಹೋದಾಗ ಅಥವಾ ದಿಢೀರ್ ರಾಜಕೀಯ ಅರಾಜಕತೆ ಉಂಟಾದಾಗ ವಿವಿಧ ಪಕ್ಷಗಳು ಸರ್ಕಾರ ರಚನೆ ಮಾಡಲು ಮುಂದಾಗಿ ಶಾಸಕರನ್ನು ಸೆಳೆಯಲು ಮುಂದಾಗುವುದು ಸಾಮಾನ್ಯ. ಈ ವೇಳೆ ತಮ್ಮ ಪಕ್ಷದ ಸದಸ್ಯರನ್ನ ಸೇಫ್ ಆಗಿ ಉಳಿಸಿಕೊಳ್ಳುವ ಉದ್ದೇಶದಿಂದ ವಿವಿಧ ಪಕ್ಷಗಳು ರೆಸಾರ್ಟ್ ರಾಜಕೀಯದ (Resort Politics) ಮೊರೆ ಹೋಗುತ್ತವೆ. ಇದಕ್ಕೆ ಪೂರಕವೆಂಬಂತೆ ಈ ಹಿಂದೆ ಕರ್ನಾಟಕದಲ್ಲಿ (karnataka) ರೆಸಾರ್ಟ್ ರಾಜಕಾರಣ ನಡೆದಿತ್ತು. ಇದೀಗ ಮತ್ತೆ ರೆಸಾರ್ಟ್ ಆರಂಭವಾಗಿದೆ. ಹೌದು….ವಿಧಾನ ಪರಿಷತ್ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಆತಂಕ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಮತಗಳ ರಕ್ಷಣೆಗಾಗಿ ರೆಸಾರ್ಟ್ ಮೊರೆಹೋಗಿದೆ.
ಕಾಂಗ್ರೆಸ್ ತನ್ನ ಎಲ್ಲಾ ಶಾಸಕರಿಗಾಗಿ ಬಿಡದಿಯ ವಂಡರ್ ಲಾ ರೆಸಾರ್ಟ್ ನಲ್ಲಿ 140 ರೂಮ್ ಬುಕ್ ಆಗಿದ್ದು,
ಎರಡು ದಿನ ಅಂದರೆ ಇಂದು ಜೂನ್ 16) ಮತ್ತು ನಾಳೆ (ಜೂನ್ 17) ರೆಸಾರ್ಟ್ನಲ್ಲಿ ತಂಗಲಿದ್ದಾರೆ. ಬಳಿಕ ಜೂನ್ 18ರಂದು ಬೆಳಗ್ಗೆ ನೇರವಾಗಿ ರೆಸಾರ್ಟ್ನಿಂದಲೇ ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡಲಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.