ಬೆಂಗಳೂರು, ಆಗಸ್ಟ್ 13: ಕರ್ನಾಟಕ ಬಂದ್ಗೆ ಕರೆ ನಡುವೆಯೂ ರಾಜ್ಯದ ಶಾಲಾ-ಕಾಲೇಜುಗಳು ಎಂದಿನಂತೆ ಇಂದು ಕಾರ್ಯನಿರ್ವಹಿಸಲಿವೆ, ಯಾವುದೇ ರಜೆ ಘೋಷಿಸಲಾಗಿಲ್ಲ. ತರಗತಿಗಳು ನಡೆಯಲಿದ್ದು, ಪರೀಕ್ಷೆಗಳು ನಡೆಯುತ್ತಿರುವ ಕಾರಣ ಮಕ್ಕಳಿಗೆ ತೊಂದರೆಯಾಗಬಾರದೆಂಬುದು ಪೋಷಕರ ಸಂಘಟನೆಗಳು ಬಂದ್ಗೆ ಬೆಂಬಲ ನೀಡದಿರಲು ತೀರ್ಮಾನಿಸಿವೆ. ರಾಜ್ಯದ ಎಲ್ಲಾ ಕಡೆ ಎಂದಿನಂತೆ ಶಾಲಾ, ಕಾಲೇಜುಗಳು ಓಪನ್ ಆಗುತ್ತಿವೆ. ಅಂಗಡಿ ಮುಂಗಟ್ಟುಗಳು, ಮಾರ್ಕೆಟ್ಗಳು ಓಪನ್ ಆಗಿವೆ. ಬಹುತೇಕ ಜಿಲ್ಲೆಗಳಲ್ಲಿ ಬಂದ್ಗೆ ನೈತಿಕ ಬೆಂಬಲ ಮಾತ್ರ ಘೋಷಣೆ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
