ಮೈಸೂರು, ಆಗಸ್ಟ್ 01: ‘ಕರ್ನಾಟಕ ಮೂಲಕ ಭಾರತವನ್ನ ಇಡೀ ಜಗತ್ತು ನೋಡುತ್ತಿದೆ. ಹಾಗಾಗಿ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ’ ಅವರಿಗೆ ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು. ಇಂದು ಮೈಸೂರಿನಲ್ಲಿ ನಡೆದ ವಿವೇಕ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿವಹಿಸಿ ಮಾತನಾಡಿದ ಅವರು, ‘ಇದೊಂದು ಐತಿಹಾಸಿಕ ಕಾರ್ಯಕ್ರಮ. ಯುವಕರ ಕನಸು ದೇಶದ ಕನಸಾಗಿದೆ. ವಿವೇಕಾನಂದರ ಯೋಚನೆಗಳನ್ನ ನಮ್ಮ ಸರ್ಕಾರ ಪಾಲಿಸುತ್ತೆ. ಇಡೀ ವಿಶ್ವವೇ ಇಂದು ಕರ್ನಾಟಕವನ್ನ ಗಮನಿಸುತ್ತಿದೆ. ಹಳ್ಳಿ, ನಗರಗಳಲ್ಲಿ ಯುವಶಕ್ತಿ ಸರಿಯಾಗಿ ಬಳಸಿಕೊಳ್ಳಬೇಕು, ಹಾಗಾಗಿ ಕೆಲ ಯೋಜನೆಗಳನ್ನ ಜಾರಿಗೆ ತರಲು ಚಿಂತನೆ ನಡೆದಿದೆ’ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
