ಕರ್ನಾಟಕ ಹವಾಮಾನ ವರದಿ: ಇಂದೂ ಮುಂದುವರೆದ ವರುಣನ ಆರ್ಭಟ! 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕ ಹವಾಮಾನ ವರದಿ: ಇಂದೂ ಮುಂದುವರೆದ ವರುಣನ ಆರ್ಭಟ! 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮಾರ್ಚ್​ 28: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast)  ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​

ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 30-40 Km/h ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

Leave a Reply

Your email address will not be published. Required fields are marked *