Headlines

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಮತ್ತೊಮ್ಮೆ ಹೀಟ್​ವೇವ್ ಆತಂಕ! ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Rain Update: Heatwave Alert in Coastal region, Thunderstorm in South

ಕರಾವಳಿಯಲ್ಲಿ ಮತ್ತೊಮ್ಮೆ ಹೀಟ್​ವೇವ್ ಆತಂಕ!

ಬೆಂಗಳೂರು, ಮೇ 13: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Weather)  ಇಲಾಖೆ ತಿಳಿಸಿದೆ. ಇಷ್ಟು ದಿನ ತಂಪಾಗಿದ್ದ ಕರಾವಳಿಯಲ್ಲಿ ಈಗ ಮತ್ತೊಮ್ಮೆ ಹೀಟ್​ವೇವ್ ಆತಂಕ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವೆಡೆ ಇಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಮುಖ್ಯಾಂಶಗಳು

  • ಮುಂದಿನ 4 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ
  • ಕರಾವಳಿಯಲ್ಲಿ ಹೀಟ್​ವೇವ್ ಆತಂಕ

ಎಲ್ಲೆಲ್ಲಿ ಮಳೆ?

ಕರಾವಳಿಯಲ್ಲಿ ಇಂದು ಹೀಟ್ ವೇವ್ ಅಲರ್ಟ್​ ನೀಡಲಾಗಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್​

ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *