ಬೆಂಗಳೂರು, ಮೇ 06: ಮುಂದಿನ 7 ದಿನಗಳ ಕಾಲ ಕರ್ನಾಟಕದಾದ್ಯಂತ (karnataka) ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಜೊತೆಗೆ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿವೆ.
ಮುಖ್ಯಾಂಶಗಳು
- ರಾಜ್ಯದಲ್ಲಿ ಇಂದಿನಿಂದ ಮೇ 12ರವರೆಗೆ ಕೆಲವೆಡೆ ಮಳೆ ಮುನ್ಸೂಚನೆ
- ಕರ್ನಾಟಕದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ
- ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ
ಕರಾವಳಿ ಕರ್ನಾಟಕದಲ್ಲಿ ಇಂದಿನಿಂ ಮೇ 12ರವರೆಗೆ ಕರಾವಳಿ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗಂಟೆಗೆ 30-40 ಕಿಮೀ ವೇಗದಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಟ್ವೀಟ್
ಮುಂದಿನ 7 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ, ಹಾಗೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ pic.twitter.com/9eScnH09Db
— Karnataka State Natural Disaster Monitoring Centre (@KarnatakaSNDMC) May 6, 2026
ಉತ್ತರ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಮಳೆ: ಬಿಸಿಯಲ್ಲಿ ಬೆಂದು ಹೋಗಿದ್ದ ಮಂಗಳೂರಿಗೆ ವರುಣನ ಸಿಂಚನ
ಇನ್ನು ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ಮೇ 9ರಿಂದ 12ರವರೆಗೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೇ 7 ಮತ್ತು 8ರಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು, ಬಲವಾದ ಗಾಳಿ (40-50 ಕಿಮೀ ವೇಗ) ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ.
ತಾಪಮಾನದಲ್ಲಿ ಬದಲಾವಣೆ ಇಲ್ಲ
ಮುಂದಿನ 5 ದಿನಗಳವರೆಗೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 6:46 pm, Wed, 6 May 26
