‘ಕವಳ’ (Kavala) ಕನ್ನಡ ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನಡೆದಿದ್ದು ನಟ ರವಿಚಂದ್ರನ್ (Ravichandran) ಅವರು ಕ್ಲಾಪ್ ಮಾಡುವ ಮೂಲಕ ಸಿನಿಮಾಕ್ಕೆ ಶುಭ ಹಾರೈಸಿದರು. ತಮಿಳಿನ ಜನಪ್ರಿಯ ನಟ, ನಿರ್ದೇಶಕ ಸಮುದ್ರಕಿಣಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಆಕ್ಷನ್ ಸಿನಿಮಾ ಆಗಿದ್ದು, ಕವಳ ಹೆಸರಿನ ರೌಡಿಯ ಕತೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ನಾಯಕನಾಗಿ ಸಂದೀಪ್ ನಾಗರಾಜ್ ನಟಿಸುತ್ತಿದ್ದಾರೆ. ಈ ಸಿನಿಮಾ ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲದಲ್ಲಿ ನಿರ್ಮಾಣ ಆಗುತ್ತಿದೆ. ಸಿನಿಮಾವನ್ನುಶ್ರೀ ಜೈ ನಿರ್ದೇಶನ ಮಾಡುತ್ತಿದ್ದಾರೆ. ನಟ ರವಿಚಂದ್ರನ್ ಸಿನಿಮಾಕ್ಕೆ ಶುಭ ಹಾರೈಸಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
