Headlines

ಕಾಂಗ್ರೆಸ್​​ನಲ್ಲಿ ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು

ಕಾಂಗ್ರೆಸ್​​ನಲ್ಲಿ ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು

ಬೆಂಗಳೂರು, ಜುಲೈ 14: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ಕಾಂಗ್ರೆಸ್ ಶಾಸಕರೊಂದಿಗೆ ವಿಶೇಷ ಸಭೆ ನಡೆಸಿದ್ದು, ಈ ಸಭೆಯಲ್ಲಿ ಬಹುತೇಕ ಶಾಸಕರು ಭಾಗವಹಿಸಿದ್ದರೂ ಇಬ್ಬರು ಪ್ರಮುಖ ನಾಯಕರು ಗೈರಾಗಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಮೀಟಿಂಗ್​​ನಿಂದ ದೂರವೇ ಉಳಿದಿದ್ದು, ಅವರ ಈ ನಿರ್ಧಾರದ ಬಗ್ಗೆ ನಾನಾ ವ್ಯಾಖ್ಯಾನಗಳು ಕೇಳಿಬಂದಿವೆ. ಭೈರತಿ ಸುರೇಶ್​​ ಕೂಡ ಸಭೆಗೆ ಗೈರು ಹಾಜರಾಗಿದ್ದಾರೆಯಾದರೂ ಅವರು ಪೂರ್ವನಿಯೋಜಿತ ಕಾರ್ಯಕ್ರಮದ ನಿಮಿತ್ತ ರಾಜ್ಯದಲ್ಲಿಲ್ಲ ಎನ್ನಲಾಗಿದೆ. ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಸಿಗದ ಕುರಿತು ಮೊದಲಿನಿಂದಲೂ ಅಸಮಾಧಾನವಿತ್ತು. ನಂತರ ಅವರನ್ನು ಮನವೊಲಿಸಲಾಗಿದ್ದರೂ, ಇಂದಿನ ಸಭೆಗೆ ಅವರು ಹಾಜರಾಗದಿರುವುದು ಆ ಮುನಿಸು ಇನ್ನೂ ತಣ್ಣಗಾಗಿಲ್ಲವಾ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *