
ಹೈದರಾಬಾದ್, ಏಪ್ರಿಲ್ 10: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ ಎಫ್ಐಆರ್ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ (ಏಪ್ರಿಲ್ 10) ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಅವರಿಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಂಬಂಧಿತ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ. ಖೇರಾ ಅವರ ನಿವಾಸವಿರುವ ಹೈದರಾಬಾದ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಲಾಗಿದೆ.
ಗುರುವಾರ ತೆಲಂಗಾಣ ಹೈಕೋರ್ಟ್ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತು. ತಕ್ಷಣದ ಪರಿಹಾರ ನೀಡುವ ಬದಲು, ನ್ಯಾಯಾಲಯವು ತನ್ನ ಆದೇಶವನ್ನು ಶುಕ್ರವಾರಕ್ಕೆ ಕಾಯ್ದಿರಿಸಿತ್ತು.ಏಪ್ರಿಲ್ 5 ರಂದು ಪತ್ರಿಕಾಗೋಷ್ಠಿಯಲ್ಲಿ ಪವನ್ ಖೇರಾ ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದಾಗ ವಿವಾದ ಭುಗಿಲೆದ್ದಿತ್ತು.
ಬಹು ಪಾಸ್ಪೋರ್ಟ್ಗಳನ್ನು ಹೊಂದಿದ್ದಾರೆ ಮತ್ತು ವಿದೇಶದಲ್ಲಿ ಆಸ್ತಿ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ, ಆದರೆ ಅವುಗಳನ್ನು ಅವರ ಚುನಾವಣಾ ಅಫಿಡವಿಟ್ನಲ್ಲಿ ಬಹಿರಂಗಪಡಿಸಿಲ್ಲ ಎಂದಿದ್ದರು. ಶರ್ಮಾ ಕುಟುಂಬವು ಈ ಆರೋಪಗಳನ್ನು ತೀವ್ರವಾಗಿ ತಿರಸ್ಕರಿಸಿತು, ಅವುಗಳನ್ನು ಸುಳ್ಳು, ಕಟ್ಟುಕಥೆ ಮತ್ತು ದುರುದ್ದೇಶಪೂರಿತ ಎಂದು ಕರೆದಿದೆ.
ಮತ್ತಷ್ಟು ಓದಿ: ಬೆಂಗಳೂರಿನ 1 ಲಕ್ಷ ನಕಲಿ ಮತದಾರರಿಗೇಕೆ ನೋಟಿಸ್ ನೀಡಿಲ್ಲ? ಚುನಾವಣಾ ಆಯೋಗಕ್ಕೆ ಪವನ್ ಖೇರಾ ಪ್ರಶ್ನೆ
ರಿನಿಕಿ ಭುಯಾನ್ ಶರ್ಮಾ ಅವರ ದೂರಿನ ನಂತರ, ಖೇಡಾ ವಿರುದ್ಧ ಗುವಾಹಟಿ ಅಪರಾಧ ಶಾಖೆಯಲ್ಲಿ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಪ್ರಕರಣ ದಾಖಲಾದ ನಂತರ, ಅಸ್ಸಾಂ ಪೊಲೀಸರ ತಂಡವು ಖೇಡಾ ಅವರ ದೆಹಲಿ ನಿವಾಸಕ್ಕೆ ವಿಚಾರಣೆಗಾಗಿ ಆಗಮಿಸಿತು.ಆದರೆ ಅವರು ಹಾಜರಿರಲಿಲ್ಲ.
ಖೇಡಾ ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ, ತಾವು ಕಾನೂನು ಪಾಲಿಸುವ ನಾಗರಿಕ, ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಮತ್ತು ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ನ್ಯಾಯಾಲಯಕ್ಕೆ ಸಂಪೂರ್ಣವಾಗಿ ಸಹಕರಿಸುವುದಾಗಿ ತಿಳಿಸಿದ್ದಾರೆ. ಬಂಧನ ಪೂರ್ವ ಜಾಮೀನು ನೀಡುವಂತೆ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ