ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಿಕ್ತು ವಿಶೇಷ ಸ್ಥಾನ – Kannada News | Minister Yathindra Siddaramaiah gets chance to Sit On Stage of CLP Meeting

ಬೆಂಗಳೂರು, (ಜೂನ್ 16): ಇದೇ ಜೂನ್ 18ರಂದು ವಿಧಾನಪರಿಷತ್​ನ 7 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರು ರೆಸಾರ್ಟ್​​​ಗೆ ಶಿಫ್ಟ್ ಆಗಿದ್ದು, ಬಿಡದಿ ಬಳಿಯ ವಂಡರ್​ಲಾ ರೆಸಾರ್ಟ್​ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಿಎಲ್​ಪಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದಾರೆ. ಇನ್ನು ಸಭೆಯಲ್ಲಿ ಮಾದರಿ ಮತಪತ್ರ ಪ್ರದರ್ಶಿಸಿ ಮತದಾನ ಮಾಡುವುದು ಹೇಗೆ ಎಂದು ಮಾಹಿತಿ ನೀಡಲಾಗುತ್ತಿದೆ.

ಇನ್ನು ವಿಶೇಷ ಅಂದ್ರೆ ಈ ಸಭೆಯಲ್ಲಿ ಸಿದ್ದರಾಮಯ್ಯನವರ ಪುತ್ರ, ಸಚಿವರೂ ಆಗಿರುವ ಯತೀಂದ್ರ ಅವರಿಗೆ ವಿಶೇಷ ಗೌರವ ನೀಡಲಾಗಿದೆ. ಹೌದು..ಶಾಸಕಾಂಗ ಪಕ್ಷದ ಸಭೆಯ ವೇದಿಕೆ ಮೇಲೆ ಹಿರಿಯ ಸಚಿವರಿಗೂ ಅವಕಾಶ ಇಲ್ಲ. ಆದ್ರೆ, ಯತೀಂದ್ರ ಸಿದ್ದರಾಮಯ್ಯನವರಿಗೆ ವೇದಿಕೆ ಮೇಲೆ ಅವಕಾಶ ನೀಡಿರುವುದು ಅಚ್ಚರಿ ಮೂಡಿಸಿದ್ದು, ಈ ಸಂಬಂಧ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *