Headlines

ಕಾಂಗ್ರೆಸ್​​ ಸೇರ್ತಾರ ಜಿ.ಟಿ. ದೇವೇಗೌಡ?: ಸ್ವತಃ ಸ್ಪಷ್ಟನೆ ಕೊಟ್ಟ ಜೆಡಿಎಸ್​​ ಶಾಸಕ – Kannada News | G.T. Devegowda Clarifies Stand Amid Congress Joining Rumours

ಮೈಸೂರು, ಜೂನ್​​ 28: ತಮ್ಮ ಕುರಿತು ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಆಡಿರುವ ಮಾತುಗಳಿಗೆ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ ಕೌಂಟರ್​​ ಕೊಟ್ಟಿದ್ದಾರೆ. ನನ್ನ ಬೆಂಬಲದಿಂದಲೇ ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಬಿಟ್ಟರೆ ಬೇರೆ ರಾಜಕಾರಣ ನನಗೆ ಗೊತ್ತಿಲ್ಲ. ಕುಮಾರ ಪರ್ವ ಮಾಡಿದ್ದು ಚಾಮುಂಡೇಶ್ವರಿ ಜನ ಮಾತ್ರ. ಬೇರೆ ಯಾವ ಕ್ಷೇತ್ರದಲ್ಲೂ ಈ ರೀತಿಯ ಸಮಾವೇಶ ಮಾಡಿಲ್ಲ. ನನಗೆ ಫೋನ್ , ಇನ್ಸ್ಟಾಗ್ರಾಂ ನೋಡಲು ಬರಲ್ಲ. ಎಸ್​ಎಂಎಸ್​​​ ನೋಡಲೂ ಬರಲ್ಲ. ಪಿಎಗಳು ಫೋನ್ ಮಾಡಿಕೊಡ್ತಾರೆ. ನಾನು ಟಿವಿ ನೋಡಿಲ್ಲ, ಹೀಗಾಗಿ ಅವರ ಹೇಳಿಕೆಯನ್ನ ಗಮನಿಸಿಲ್ಲ ಎಂದು ಜಿಟಿಡಿ ಹೇಳಿದ್ದಾರೆ. ಕಾಂಗ್ರೆಸ್​​ಗೆ ಸೇರುವ ವದಂತಿಗಳಿಗೂ ಇದೇ ವೇಳೆ ಅವರು ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Leave a Reply

Your email address will not be published. Required fields are marked *