ಕಾನೂನು ಇರುವುದೇ ಹಾಗೆ: ಬಿಜೆಪಿ ಆರೋಪಗಳಿಗೆ ಸ್ಪೀಕರ್ ಖಾದರ್ ಖಡಕ್ ಸ್ಪಷ್ಟನೆ – Kannada News | Speeker UT Khader Reacts On BJP Allegations about DN Jeevaraj oath Taking

ಬೆಂಗಳೂರು, (ಮೇ 06): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ (shringeri Assembly Result) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ (BJP DN Jeevaraj )ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ವರ್ಷಗಳ ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಇಂದು (ಮೇ 06) ಶೃಂಗೇರಿ ಶಾರದಾಂಬೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಸ್ಪೀಕರ್ ಯುಟಿ ಖಾದರ್ (UT Khader) ಪ್ರಮಾಣವಚನ ಬೋಧಿಸಿದರು. ಬಳಿಕ ಬಿಜೆಪಿ ಆರೋಪಗಳಿಗೆ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ.

ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಬಳಿಕ ಉಂಟಾದ ರಾಜಕೀಯ ಗದ್ದಲದಿಂದ ತಮ್ಮ ಮೇಲೆ ಬಿಜೆಪಿ ಮಾಡಿದ್ದ ಆರೋಪದ ಬಗ್ಗೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್, ಆಯೋಗ ಪ್ರಮಾಣಪತ್ರ ನೀಡಿದ ಬಳಿಕ ಪ್ರಮಾಣವಚನ ಬೋಧಿಸಬೇಕು. ಹೀಗಾಗಿ ಆಯೋಗ ಪ್ರಮಾಣಪತ್ರ ನೀಡಿದ್ದರಿಂದ ಪ್ರಮಾಣವಚನ ಬೋಧಿಸಿದ್ದೇನೆ. ಒಂದು ವೇಳೆ ಕೋರ್ಟ್ ತಡೆಯಾಜ್ಞೆ ಕೊಟ್ಟರೆ ಡಿ.ಎನ್.ಜೀವರಾಜ್​ ಶಾಸಕ ಸ್ಥಾನ ರದ್ದಾಗಲಿದೆ. ನಂತರ ಟಿ.ಡಿ.ರಾಜೇಗೌಡರಿಗೆ ಪ್ರಮಾಣವಚನ ಬೋಧಿಸಬೇಕಾಗಬಹುದು. ಕಾನೂನು ಇರುವುದೇ ಹಾಗೆ, ಕಾನೂನು ತಜ್ಞರ ಜೊತೆ ಮಾತನಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ನೋಡಿ: ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್

Source link

Leave a Reply

Your email address will not be published. Required fields are marked *