ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು – Kannada News | A young woman Commits Suicide By hanging herself in hostel at belagavi

ಬೆಂಗಳೂರು, (ಮೇ 11): ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಮಾಡಿಕೊಂಡಿದ್ದ ಯುವತಿಯೊಬ್ಬಳು ಜನ್ಮದಿನದಂದೇ ನೇಣಿಗೆ ಶರಣಾದ ಘಟನೆ ಬೆಳಗಾವಿಯ (Belagavi) ಅಜಂ ನಗರದ ಹಾಸ್ಟೆಲ್‌ನಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಹುಕ್ಕೇರಿ (Hukkeri) ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ‌ (21) ಎಂದು ಗುರುತಿಸಲಾಗಿದೆ. ಯುವತಿ ಅಂತಿಮ ವರ್ಷದ ಬಿಎಸ್‌ಸಿ ಪದವಿ ಓದುತ್ತಿದ್ದ ಕಾವೇರಿಗೆ ಕಳೆದ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಕಾನ್ಸ್​​ಟೇಬಲ್ ಜೊತೆ ವಿವಾಹ ನಿಶ್ಚಿತಾರ್ಥವಾಗಿತ್ತು. ಆದ್ರೆ, ಇದೀಗ ಏಕಾಏಕಿ ಆತ್ಮಹತ್ಯ ಮಾಡಿಕೊಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *