ಚಿಕ್ಕಮಗಳೂರು, ಜುಲೈ 8: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯ ಪ್ರಮುಖ ತಾಲೂಕುಗಳಾದ ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ, ಎನ್.ಆರ್. ಪುರ ಹಾಗೂ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡುವಿಲ್ಲದೆ ಧಾರಾಕಾರ ಮಳೆ ಸುರಿಯುತ್ತಿದೆ. ಮಲೆನಾಡಿನ ಈ ಭಾರಿ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ವರುಣಾರ್ಭಟಕ್ಕೆ ಕಳಸ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ‘ಸೂರುಮನೆ ಜಲಪಾತ (Soorumane Falls)’ ಸಂಪೂರ್ಣವಾಗಿ ಮೈದುಂಬಿಕೊಂಡಿದೆ. ಘಟ್ಟ ಪ್ರದೇಶದ ನೀರೆಲ್ಲವೂ ಜಲಪಾತಕ್ಕೆ ಹರಿದು ಬರುತ್ತಿರುವುದರಿಂದ ಸೂರುಮನೆ ಫಾಲ್ಸ್ ಭೋರ್ಗರೆದು ಹರಿಯುತ್ತಿದ್ದು, ರುದ್ರರಮಣೀಯವಾಗಿ ಕಂಗೊಳಿಸುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
