Headlines

ಕಾರ್ಖಾನೆ ಸ್ಥಳಾಂತರದ ವೇಳೆ ಅವಘಡ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು – Kannada News | Mandya Chemical Tank Explosion: 2 Workers Dead During Kirti Factory Relocation

ಕೆಮಿಕಲ್ ಟ್ಯಾಂಕ್ ಸ್ಫೋಟImage Credit source: Tv9 Kannada

ಮಂಡ್ಯ/ ಬೆಂಗಳೂರು, ಫೆಬ್ರವರಿ 15: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕರು ಕಾರೆಕಟ್ಟೆಯಿಂದ‌ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್​​ ಮಾಡುತ್ತಿದ್ದ ವೇಳೆ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸ್ಥಳಾಂತರ ಕೆಲಸ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿತ್ತು ಎನ್ನಲಾಗಿದ್ದು, ಇಂದು ಕಾರ್ಮಿಕರು ರಾಸಾಯನಿಕ ಟ್ಯಾಂಕ್​​ ತೆರವು ಮಾಡುತ್ತಿದ್ದ ವೇಳೆ ಅವಘಡ ನಡೆದಿದೆ.

4 ವರ್ಷಗಳ ಹಿಂದೆಯೂನಡೆದಿತ್ತು ಅವಘಡ

ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ, ಇದೇ ಕಾರ್ಖಾನೆಯಲ್ಲಿ 4 ವರ್ಷಗಳ ಹಿಂದೆಯೂ ಅವಘಡ ನಡೆದಿತ್ತು. ರಾಸಾಯನಿಕ ಸೋರಿಕೆಯಾಗಿ‌ ನೂರಾರು ಎಕರೆ ಬೆಳೆ ಹಾನಿಯ ಜೊತೆಗೆ ಎರಡು ನಾಯಿಗಳು ಮೃತಪಟ್ಟಿದ್ದವು. ಬಳಿಕ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಆ ವೇಳೆ ಹಾನಿಯಾದ ಬೆಳೆಗೆ ಮಂಡ್ಯ ಜಿಲ್ಲಾಡಳಿತ ಪರಿಹಾರ ಕೊಡಿಸಿದ್ದು, ಹೀಗಾಗಿ ಕಾರ್ಖಾನೆyನ್ನ ಸದ್ಯ ಬೇರೆಡೆ ಸ್ಥಳಾಂತರ ಮಾಡಿಸಲಾಗುತ್ತಿತ್ತು. ಆದರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೆ ಇದ್ದಿದ್ದರಿಂದ ಮತ್ತೆ ದುರಂತ ನಡೆದಿದೆ. ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:  ತೆಲಂಗಾಣದ ಲ್ಯಾಬ್​​​ನಲ್ಲಿ ರೇಡಿಯೇಟರ್ ಸ್ಫೋಟ; 11 ಜನರಿಗೆ ಗಾಯ

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟ: ನವ ದಂಪತಿಗೆ ಗಾಯ

ಗ್ಯಾಸ್ ಸಿಲಿಂಡರ್ ಸೋರಿಕೆ ಹಿನ್ನೆಲೆ ಉಂಟಾದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ ಚೌಡೇಶ್ವರಿ ಲೇಔಟ್​​ನಲ್ಲಿ ನಡೆದಿದೆ. ಸ್ಪೋಟದ ತೀವ್ರತೆಗೆ ಮನೆ ಗೋಡೆ ಛಿದ್ರವಾಗಿದ್ದು, ಇತ್ತೀಚೆಗೆ ಮದುವೆಯಾಗಿದ್ದ ಬಾಗೇಪಲ್ಲಿ ಮೂಲದ ದಂಪತಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಕೃಷ್ಣಮ್ಮ ಮತ್ತು ರಾಜು ಗಾಯಾಳುಗಳಾಗಿದ್ದು, ಸ್ಥಳೀಯರು ದಂಪತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಯಲಹಂಕ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *