ಹುಬ್ಬಳ್ಳಿ, ಜನವರಿ 04: ಹುಬ್ಬಳ್ಳಿಯ ಉಣಕಲ್ ಬಿಆರ್ಟಿಎಸ್ ಪಥದಲ್ಲಿ ಕಾರ್ ಮತ್ತು ಚಿಗರಿ ಬಸ್ ನಡುವೆ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಕಾರು ಎದುರಿನಿಂದ ಬಂದ ಚಿಗರಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಗಿರೀಶ ಬಣವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎದೆ ಝಲ್ಲೆನಿಸುವ ಈ ದೃಶ್ಯ ಮತ್ತೊಂದು ಕಾರಿನ ಡ್ಯಾಶ್ಕ್ಯಾಮ್ನಲ್ಲಿ ಸೆರೆಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.