ಬೆಂಗಳೂರು, (ಜುಲೈ 30): ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಮುಂದಾಗಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾನೂನು ಹಾಗೂ ರಾಜಕೀಯ ಹೋರಾಟದ ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಸರ್ವಪಕ್ಷಗಳ ಸಭೆ (All-Party Meeting) ಕರೆದಿದ್ದಾರೆ. ಆಗಸ್ಟ್ 2ರ ಭಾನುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸರ್ವಪಕ್ಷ ಸಭೆ ಕರೆದಿದ್ದಾರೆ.