ಕುಡಿದು ಮಠದಲ್ಲಿ ಸ್ವಾಮೀಜಿ ರಂಪಾಟ: ಮತ್ತಿನಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶ್ರೀ – Kannada News | Kalaburgi Shanthalinga Swamiji Gun Fire On Air video Goes viral

ಕಲಬುರಗಿ, (ಡಿಸೆಂಬರ್ 22): ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಕುಡಿದು ರಂಪಾಟ ಮಾಡಿದ್ದಾರೆ. ಕೆಲ ತಿಂಗಳಿನಿಂದ ನಾಪತ್ತೆಯಾಗಿದ್ದ ಕಲಬುರಗಿ (Kalaburgi) ಜಿಲ್ಲೆ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಮಠದ ಶಾಂತಲಿಂಗ ಶಿವಾಚಾರ್ಯ, ಇದೀಗ ದಿಢೀರ್ ಮಠದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿರುವ ಸುದ್ದಿ ತಿಳಿದು ಸ್ವಾಮೀಜಿ ಮಠಕ್ಕೆ ವಾಪಸ್ ಆಗಿದ್ದಾರೆ. ಆದ್ರೆ, ಕುಡಿದು ಮಠದ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಮೂಲಕ ತಮ್ಮ ವಿರೋಧಿಗಳನ್ನ ಹೆದರಿಸಲು ಗುಂಡು ಹಾರಿಸಿದ್ರಾ ಎನ್ನುವ ಚರ್ಚೆಗಳು ನಡೆದಿದ್ದು, ಸದ್ಯ ಗುಂಡು ಹಾರಿಸಿರುವ ವಿಡಿಯೋ ವೈರಲ್ ಆಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *