ಕೃಷಿ ಅಧಿಕಾರಿಯೋ, ಕುಬೇರನೋ! ಲೋಕಾಯುಕ್ತ ದಾಳಿ ವೇಳೆ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ – Kannada News | Lokayukta Raid on Vijayapura Agriculture Officer Exposes ₹2.5 Crore Disproportionate Assets

ವಿಜಯಪುರ, ಡಿಸೆಂಬರ್ 24: ವಿಜಯಪುರ ಜಿಲ್ಲೆಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಾಳಪ್ಪ ಯರಝರಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಆದಾಯಕ್ಕಿಂತ ಹೆಚ್ಚುವರಿಯಾಗಿ ಮಾಡಿಟ್ಟ 2.50 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬಾಗೇವಾಡಿಯ ಕೃಷಿ ಇಲಾಖೆಯ ಈ ಅಧಿಕಾರಿಯ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಲೋಕಾಯುಕ್ತ ತಂಡ ವಶಪಡಿಸಿಕೊಂಡಿದೆ. ದಾಳಿ ವೇಳೆ 29.48 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಮತ್ತು ನಗದು ಪತ್ತೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *