ಬೆಂಗಳೂರು, (ಏಪ್ರಿಲ್ 20): ಬಿಟ್ಕಾಯಿನ್ ಪ್ರಕರಣಕ್ಕೆ (bitcoin Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನಲ್ಲಿ ದಾಳಿ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಹಾಗೂ ಪುತ್ರ ಮೊಹಮ್ಮದ್ ನಲಪಾಡ್ ಮಾತ್ರವಲ್ಲದೇ ಮಾಜಿ ಕೇಂದ್ರ ಸಚಿವ ಕೆ. ರೆಹಮಾನ್ ಖಾನ್ ಅವರ ಮೊಮ್ಮಗ ಮಹಮ್ಮದ್ ಹಕೀಬ್ ಖಾನ್ ಅವರ ನಿವಾಸಗಳ ಮೇಲೆ ಶೋಧ ಕಾರ್ಯಾಚರಣೆ ನಡೆದಿದೆ.
ಬೆಂಗಳೂರಿನ ಜಯನಗರದಲ್ಲಿರುವ ಕೆ.ರೆಹಮಾನ್ ಖಾನ್ ನಿವಾಸಕ್ಕೆ 2 ಇನೋವಾ ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳ ತಂಡ, ಕಳೆದ ಆರು ಗಂಟೆಗಳಿಂದ ಪರಿಶೀಲನೆ ನಡೆಸಿದೆ. ಹಾಗೇ ಕೆ.ರೆಹಮಾನ್ ಖಾನ್ ಮೊಮ್ಮಗ ಮೊಹಮ್ಮದ್ ಹಕೀಬ್ ನನ್ನು ಸಹ ವಿಚಾರಣೆ ನಡೆಸಿದ್ದಾರೆ.