Headlines

ಕೇಜ್ರಿವಾಲ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮ – Kannada News | Delhi High Court judge Swarna Kanta Sharma recuses from excise policy case hear Contempt action aganist Arvind Kejriwal

ನವದೆಹಲಿ, ಮೇ 14: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಮತ್ತು ನ್ಯಾಯಾಲಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಮಾನನಷ್ಟ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡಲಾಗಿದೆ ಎಂಬ ಆರೋಪದ ಮೇಲೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಅವರ ಪಕ್ಷದ ಇತರ ಹಿರಿಯ ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸುವುದಾಗಿ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದಾರೆ.

ಹಾಗೇ, ದೆಹಲಿ ಹೈಕೋರ್ಟ್ ನ್ಯಾಯಾಧೀಶೆ ಸ್ವರಣ ಕಾಂತ ಶರ್ಮಾ ಅವರು ದೆಹಲಿ ಅಬಕಾರಿ ಪ್ರಕರಣವನ್ನು ವಿಚಾರಣೆ ನಡೆಸುವುದಿಲ್ಲ ಎಂದು ಕೂಡ ಘೋಷಿಸಿದ್ದಾರೆ. ನಾನು ಈ ಪ್ರಕರಣದ ವಿಚಾರಣೆ ನಡೆಸುವುದಿಲ್ಲ. ಆದರೆ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧದ ನ್ಯಾಯಾಂಗ ನಿಂದನೆ ಕ್ರಮವನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್​ಗೆ ಭಾರೀ ಹಿನ್ನಡೆ; ಪ್ರಕರಣದಿಂದ ಹಿಂದೆ ಸರಿಯುವುದಿಲ್ಲ ಎಂದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಮತ್ತು ನ್ಯಾಯಾಲಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಮಾನನಷ್ಟ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡಲಾಗಿದೆ ಎಂಬ ಆರೋಪದ ಮೇಲೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಕ್ಷದ ಇತರ ಹಿರಿಯ ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ಪ್ರಾರಂಭಿಸುವುದಾಗಿ ನ್ಯಾಯಮೂರ್ತಿ ಶರ್ಮಾ ಹೇಳಿದರು.

“ನನ್ನ ವಿರುದ್ಧದ ರಾಜಕೀಯ ಅಭಿಯಾನಕ್ಕೆ ನಾನು ಹೆದರುವುದಿಲ್ಲ” ಎಂದು ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಹೇಳಿದ್ದಾರೆ. ನ್ಯಾಯಾಧೀಶರು ಒತ್ತಡ ಅಥವಾ ರಾಜಕೀಯ ಶಕ್ತಿಯ ಮುಂದೆ ಶರಣಾಗಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಿಲ್ಲದ ಹೈಡ್ರಾಮಾ; ನ್ಯಾ. ಸ್ವರಣ ಕಾಂತ ಶರ್ಮಾ – ಕೇಜ್ರಿವಾಲ್ ನಡುವೆ ಕೋರ್ಟ್​ನಲ್ಲಿ ಏನೇನಾಯ್ತು?

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು ನ್ಯಾಯಾಲಯದ ಮುಂದೆ ವಿಷಯವನ್ನು ತಿಳಿಸುವ ಬದಲು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಕಾನೂನು ವಿವಾದವನ್ನು ಸಾರ್ವಜನಿಕ ಅಭಿಯಾನವನ್ನಾಗಿ ಪರಿವರ್ತಿಸಿದ್ದಾರೆ ಎಂದು ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಟೀಕಿಸಿದ್ದಾರೆ.

ಕೇಜ್ರಿವಾಲ್ ನೀಡಿದ ಹೇಳಿಕೆಗಳು, ಪತ್ರಗಳು ಮತ್ತು ಪ್ರಸಾರವಾದ ವಿಷಯಗಳು ಇದು ಕೇವಲ ಒಬ್ಬ ನ್ಯಾಯಾಧೀಶರ ವಿರುದ್ಧದ ಅಭಿಯಾನವಲ್ಲ, ಇಡೀ ನ್ಯಾಯಾಂಗ ವ್ಯವಸ್ಥೆಯನ್ನು ದೂಷಿಸಲು ಮಾಡಿದ ಸಂಘಟಿತ ಪ್ರಯತ್ನವಾಗಿದೆ ಎಂಬುದನ್ನು ಸಾಬೀತುಪಡಿಸುತ್ತಿವೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *