ಬೆಂಗಳೂರು, ಮೇ 4: ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಯುಡಿಎಫ್ (ಕಾಂಗ್ರೆಸ್ ಮೈತ್ರಿಕೂಟ) ಭಾರಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಯಾಲಿಕಟ್ (ಕೋಝಿಕ್ಕೋಡ್) ನಗರಕ್ಕೆ ತೆರಳಿದ್ದಾರೆ. ಇದು ಯುಡಿಎಫ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತಂದಿದೆ. ಜಮೀರ್ ಅಹ್ಮದ್ ಖಾನ್ ಅವರು ಕೇರಳದಲ್ಲಿ ಯುಡಿಎಫ್ ಪರವಾಗಿ ವ್ಯಾಪಕವಾಗಿ ಪ್ರಚಾರ ನಡೆಸಿದ್ದರು. ಪಕ್ಷದ ಹಿರಿಯ ನಾಯಕ ವೇಣುಗೋಪಾಲ್ ಅವರ ಸೂಚನೆಯ ಮೇರೆಗೆ ಅವರು ಕೇರಳಕ್ಕೆ ತೆರಳಿದ್ದರು. ಯುಡಿಎಫ್ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದ್ದ ಜಮೀರ್ ಅಹ್ಮದ್, ಈಗ ಪಕ್ಷದ ಯಶಸ್ಸನ್ನು ಸಂಭ್ರಮಿಸಲು ಅಲ್ಲಿಗೆ ತಲುಪಿದ್ದಾರೆ.
ಚುನಾವಣಾ ಫಲಿತಾಂಶದ ಲೈವ್ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ