ಮಡಿಕೇರಿ, ಆಗಸ್ಟ್ 1: ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಕಾವೇರಿ ಹಾಗೂ ಹಟ್ಟಿಹೊಳೆ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಹಾಗೂ ಸ್ನಾನಘಟ್ಟ ಜಲಾವೃತಗೊಂಡಿವೆ. ಇದೇ ವೇಳೆ ಹಾರಂಗಿ ಜಲಾಶಯಕ್ಕೂ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
