ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲದಲ್ಲಿ ಸ್ನಾನಘಟ್ಟ, ತ್ರಿವೇಣಿ ಸಂಗಮ, ಉದ್ಯಾನವನ ಮುಳುಗಡೆ – Kannada News | Heavy Rains Lead to Widespread Flooding in Bhagamandala, Madikeri

ಮಡಿಕೇರಿ, ಆಗಸ್ಟ್​​ 02: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಡಿಕೇರಿ ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಭಾಗಮಂಡಲ ಗ್ರಾಮ ಕೇಂದ್ರ ಸಂಪೂರ್ಣವಾಗಿ ಜಲಾವೃತವಾಗಿದೆ. ತ್ರಿವೇಣಿ ಸಂಗಮವು ಸಂಪೂರ್ಣವಾಗಿ ನೀರಿನಿಂದ ಆವೃತಗೊಂಡಿದ್ದು, ಸಂಗಮದ ಪಕ್ಕದಲ್ಲಿರುವ ಸ್ನಾನಘಟ್ಟಗಳು ಹಾಗೂ ಉದ್ಯಾನವನಗಳು ಸಹ ಮುಳುಗಡೆಯಾಗಿವೆ. ಮಳೆಯ ತೀವ್ರತೆಗೆ ಭಾಗಮಂಡಲ-ತಲಕಾವೇರಿ ಮಾರ್ಗದ ರಸ್ತೆಯು ಸಹ ನೀರಿನಿಂದ ಆವರಿಸಿದೆ. ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರು ಫ್ಲೈ ಓವರ್ ಮೂಲಕ ಓಡಾಡುತ್ತಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Leave a Reply

Your email address will not be published. Required fields are marked *