ಕೊಪ್ಪಳದಲ್ಲಿ ತೀವ್ರಗೊಂಡ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ – Kannada News | BJP Workers Intensifies Protest In Koppal, Pushes Barricades And Tries To Gherao Congress Office

ಕೊಪ್ಪಳ, (ಜುಲೈ 23): ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆತ ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ ಖಂಡಿಸಿ ಬಿಜೆಪಿ (BJP) ಸಹ ಕರ್ನಾಟಕದಾದ್ಯಂತ ಪ್ರತಿಭಟನೆ ನಡೆಸಿದೆ. ಅದರಂತೆ ಕೊಪ್ಪಳದಲ್ಲೂ ಸಹ ಬಿಜೆಪಿ, ಕಾಂಗ್ರೆಸ್ (Congress) ನಡೆ ವಿರುದ್ಧ ಪ್ರತಿಭಟನೆ ನಡೆಸಿದ್ದು, ವಿಪಕ್ಷ ನಾಯಕ ರಾಹುಲ್ ಗಾಂಧಿ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಬಳಿಕ ಪ್ರತಿಭಟನೆ ತೀವ್ರಗೊಂಡಿದ್ದು, ಕೊಪ್ಪಳ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿ ನಡೆದಿದೆ. ಈ ವೇಳೆ ಬಿಜೆಪಿ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯರ್ ಅವರು ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದಿರುವ ಪ್ರಸಂಗ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *