ಕೊಪ್ಪಳ: ಸಾಲಬಾಧೆಗೆ ನೇಣುಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ – Kannada News | Three Members of the Same Family Die: Debt Burden Suspected

ಕೊಪ್ಪಳ, ಜುಲೈ 04: ನೇಣುಬಿಗಿದುಕೊಂಡು ಒಂದೇ ಕುಟುಂಬದ (Family) ಮೂವರು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಗಂಗಾವತಿಯ ಪ್ರಶಾಂತನಗರದ‌ ಮನೆಯಲ್ಲಿ ನಡೆದಿದೆ. ಪತಿ ಪ್ರಕಾಶ್(54), ಪತ್ನಿ ಪ್ರಭಾ(46) ಮತ್ತು ಮಗ ಶಶಾಂಕ್(21) ಮೃತರು. ಸದ್ಯ ಸ್ಥಳಕ್ಕೆ ಗಂಗಾವತಿ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಗೆ ನಡೆಸಿದ್ದಾರೆ.

ಆತ್ಮಹತ್ಯೆಗೆ ಕಾರಣವೇನು?

ಪ್ರಕಾಶ್ ರಾಯ್ಕರ್​ ಜ್ಯುವೆಲರಿ ಶಾಪ್ ನಡೆಸುತ್ತಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ ಸಾಲಬಾಧೆಯೇ ಈ ದುಡುಕಿನ ನಿರ್ಧಾರಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಹೀಗಾಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಎಂಟಿಸಿ ಬಸ್​ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು

ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನಲ್ಲಿ ಮಾರತ್​ಹಳ್ಳಿ-ಕಾಡು ಬೀಸನಹಳ್ಳಿ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಆಂಧ್ರಪ್ರದೇಶ ಮೂಲದ ನಾಗಾರ್ಜುನ(29) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. ಬ್ರೇಕ್ ಹಾಕಿದಾಗ ಹಿಂಬದಿಯಿಂದ ಬೈಕ್​ಗೆ ಬಸ್​​ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಸ್ಥಳಕ್ಕೆ ಹೆಚ್​​ಎಸ್​ಆರ್​ ಲೇಔಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸ್ಥಳದಲ್ಲೇ ಸಾವು

ಮತ್ತೊಂದು ಪ್ರಕಣದಲ್ಲಿ ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿ ಹೊರವಲಯದ ರಾಣಿಕ್ರಾಸ್ ಬಳಿ ನಡೆದಿದೆ. ಆಂಧ್ರದ ಕದಿರಿ ಮೂಲದ ಸೂರ್ಯನಾರಾಯಣರೆಡ್ಡಿ(50) ಮೃತ ವ್ಯಕ್ತಿ.

ಇದನ್ನೂ ಓದಿ: K.R Circle Bus accident: ಕೆ. ಆರ್ ಸರ್ಕಲ್ ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!

ಹೆದ್ದಾರಿ ದಾಟುತ್ತಿದ್ದ ವೇಳೆ ಸೂರ್ಯನಾರಾಯಣರೆಡ್ಡಿಗೆ ಲಾರಿ ಗುದ್ದಿದೆ. ಲಾರಿ ಡಿಕ್ಕಿಯ ರಭಸಕ್ಕೆ ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಮೃತಟ್ಟಿದ್ದಾರೆ. ಇನ್ನು ಅಪಘಾತದ ನಂತರ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *