ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: 30 ಅರ್ಹ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: 30 ಅರ್ಹ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

ಬೆಂಗಳೂರು, ಮಾರ್ಚ್​ 18: ಕೋಗಿಲು ನಿರಾಶ್ರಿತರಿಗೆ ಕೊನೆಗೂ ನಿವೇಶನ ಭಾಗ್ಯ ದೊರೆತಿದೆ. ಮೂರ್ನಾಲ್ಕು ತಿಂಗಳ ಬಳಿಕ 30 ಅರ್ಹ ನಿವಾಸಿಗಳಿಗೆ ಸಚಿವರಾದ ಕೃಷ್ಣಬೈರೇಗೌಡ ಮತ್ತು ಜಮೀರ್ ಅಹ್ಮದ್‌ ಹಕ್ಕುಪತ್ರ ವಿತರಣೆ ಮಾಡಿದ್ದಾರೆ. ಆ ಮೂಲಕ ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ ಮತ್ತು ರಂಜಾನ್​​ ಹಬಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ರಾಜೀವ್ ಗಾಂಧಿ ವಸತಿ ನಿಗಮದ ಸಮುಚ್ಚಯದಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. ಹಕ್ಕುಪತ್ರ ಪಡೆದವರಲ್ಲಿ ಸಾಮಾನ್ಯ ವರ್ಗದ 10 ಕುಟುಂಬಗಳಿಗೆ ಆದ್ಯತೆ ನೀಡಲಾಗಿದೆ. ಪರಿಶಿಷ್ಟ ಜಾತಿಯ 7 ಕುಟುಂಬ, ಪರಿಶಿಷ್ಟ ಪಂಗಡದ 2 ಕುಟುಂಬ, ಅಲ್ಪಸಂಖ್ಯಾತ ಸಮುದಾಯದ 10 ಕುಟುಂಬಗಳು ಸೇರಿದಂತೆ ಒಟ್ಟು 30 ಕುಟುಂಬಗಳಿಗೆ ನಿವೇಶನದ ಹಕ್ಕುಪತ್ರ ವಿತರಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *