Headlines

ಕೋಲಾರದಲ್ಲಿ ಮುಂದುವರೆದ ಕೃಷಿ ಹೊಂಡ ಸಾವಿನ ಸರಣಿ: 20 ದಿನದಲ್ಲಿ ಮಕ್ಕಳು ಸೇರಿ 9 ಜನ ಸಾವು – Kannada News | Kolar Farm Pond Tragedy: 9 Deaths Including Children Reported in Just 20 Days

ಕೋಲಾರ, ಮೇ 26: ಜಿಲ್ಲೆಯಲ್ಲಿ ಕೃಷಿ ಹೊಂಡಗಳು (Farm Ponds) ಅಕ್ಷರಶಃ ಮೃತ್ಯು ಕೂಪಗಳಾಗಿ ಮಾರ್ಪಟ್ಟಿವೆ. ನಿನ್ನೆ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮತ್ತೆ ಇಬ್ಬರು ಸಹೋದರರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಬಳಿ ನಡೆದಿದೆ. ಆ ಮೂಲಕ ಕಳೆದ ಇಪ್ಪತ್ತು ದಿನದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು 9 ಜನರು ಮೃತಪಟ್ಟಿದ್ದಾರೆ. ಕೃಷಿಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ, ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶದ ನಡುವೆಯೂ ಸಾವಿನ ಸರಣಿ ಮುಂದುವರೆದಿದೆ.

ಮುಖ್ಯಾಂಶಗಳು

  • ಕೋಲಾರದಲ್ಲಿ ಮೃತ್ಯು ಕೂಪವಾದ ಕೃಷಿ ಹೊಂಡಗಳು
  • ಕಳೆದ 20 ದಿನದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು 9 ಜನರ ಸಾವು
  • ಕೃಷಿಹೊಂಡ ಮುಚ್ಚಲು ಜಿಲ್ಲಾಧಿಕಾರಿ ಖಡಕ್​ ಸೂಚನೆ

ತಾತನ ಮನೆಗೆ ಬಂದಿದ್ದ ಅಣ್ಣತಮ್ಮ ಕೃಷಿ ಹೊಂಡಕ್ಕೆ ಬಿದ್ದು ಸಾವು

ಜಿಲ್ಲೆಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟವರ ಸಂಖ್ಯೆ ಏರಿಕೆ ಆಗುತ್ತಿದೆ. ಕೃಷಿ ಹೊಂಡಗಳಿಗೆ ಮುಳ್ಳುತಂತಿ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂಆರ್​​ ರವಿ ಒಂದು ವಾರದ ಗಡುವು ನೀಡಿದ್ದರು. ಒಂದು ವಾರದ ನಂತರವೂ ಸಾವಿನ ಸರಣಿ ಮುಂದುವರೆದಿದೆ. ನಿನ್ನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಬಳಿ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮುಳುಗಿ ಇಬ್ಬರು ಸಹೋದರರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಮೃತ್ಯುಕೂಪವಾದ ಕೃಷಿ ಹೊಂಡಗಳು: 15 ದಿನದಲ್ಲಿ 7 ಮಂದಿ ಸಾವು

ದೇವಕಿರಣ್(12) ಮತ್ತು ವಿನುತ್​(9) ಮೃತ ಸಹೋದರರು. ಬಾಲಕರು ವಸತಿ ಶಾಲೆಯಲ್ಲಿ ಓದುತ್ತಿದ್ದರು. ಬೇಸಿಗೆ ರಜೆ ಹಿನ್ನೆಲೆ ತಾತನ ಮನೆಗೆ ಬಂದಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಾಸ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕೃಷಿ ಹೊಂಡಕ್ಕೆ ಬಿದ್ದು ಮೃತರಾದವ ವಿವರ

  • ಮೇ-5ರಂದು ಬಂಗಾರಪೇಟೆ ತಾಲ್ಲೂಕಿನ ಬೋಡೆನಹಳ್ಳಿ ಗ್ರಾಮದ ತನುಶ್ರೀ(15) ಮತ್ತು ಕಾರ್ತಿಕ್ (8) ಮೃತಪಟ್ಟಿದ್ದರು.
  • ಮೇ-8ರಂದು ಶ್ರೀನಿವಾಸಪುರ ‌ತಾಲ್ಲೂಕಿನ ಪಚ್ಚರಮಾಕಲಹಳ್ಳಿಯಲ್ಲಿ ಈಜಲು ಹೋಗಿದ್ದ ನರೇಂದ್ರ (25) ಮತ್ತು ಚಂದನ್ (24) ಮೃತಪಟ್ಟಿದ್ದರು.
  • ಮೇ- 17ರಂದು ಜಿಲ್ಲೆಯ ಮಾಲೂರು ತಾಲ್ಲೂಕು ನಕ್ಕನಹಳ್ಳಿ ಗ್ರಾಮದಲ್ಲಿ ತಂದೆ ಶ್ರೀನಿವಾಸ್ (40), ಮಕ್ಕಳಾದ ಚೇತನ್ (13) ಹಾಗೂ ರಾಜೇಶ್ (8) ಸಾವನ್ನಪ್ಪಿದ್ದರು.
  • ಮೇ-25ರಂದು ಮಾಲೂರು ತಾಲ್ಲೂಕಿನ ಕೊತ್ತೂರು ಗ್ರಾಮದಲ್ಲಿ ಸೋದರರಾದ ದೇವಿಕಿರಣ್ (12) ಹಾಗೂ ವಿನುತ್(9) ಸಾವನ್ನಪ್ಪಿದ್ದರು. ಸದ್ಯ ಸುರಕ್ಷತಾ ಕ್ರಮಕೈಗೊಳ್ಳದ ಕೃಷಿಹೊಂಡ ಮುಚ್ಚಲು ಜಿಲ್ಲಾಧಿಕಾರಿ ಖಡಕ್​ ಸೂಚನೆ ನೀಡಿದ್ದಾರೆ.

ಹೈವೇಯಲ್ಲಿ ಮತ್ತೊಂದು ಅಪಘಾತ: ಬಾಲಕ ಸಾವು

ಕೋಲಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕ ಮೃತಪಟ್ಟಿದ್ದು, ನಾಲ್ಕರಿಗೆ ಗಾಯಗಳಾಗಿರುವ ಘಟನೆ ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೈವೇಯಲ್ಲಿ ನಡೆದಿದೆ. ಬಂಗಾರಪೇಟೆ ಮೂಲದ ಮುಜಾಮಿಲ್ (9) ಮೃತ ಬಾಲಕ. ಇನೋವಾ ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಾಯಗಾಳಾಗಿವೆ.

ಇದನ್ನೂ ಓದಿ: ಗಡಿಪಾರಾಗಿದ್ದ ರೌಡಿಯನ್ನು ಮಗಳ ಮದುವೆ ಮಂಟಪದಿಂದಲೇ ಸಿನಿಮೀಯ ಶೈಲಿಯಲ್ಲಿ ಎಳೆದೊಯ್ದ ಪೊಲೀಸರು: ವಿಡಿಯೋ ವೈರಲ್

ಗಾಯಾಳುಗಳಾದ ಸಯ್ಯದ್ ಉಲ್ಲಾ, ಸಯ್ಯದ್ ಅಫ್ರಿದ್, ಯಾಸ್ಮಿನ್ ಹಾಗೂ ಅಸೀಬಾರನ್ನು ಕೋಲಾರದ ಎಸ್ ಎನ್ ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *