ಖಮೇನಿ ಸಾವಿಗೆ ಭಾರತ ಸಂತಾಪ; ಇರಾನ್ ರಾಯಭಾರಿಯನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿ ಮಿಶ್ರಿ – Kannada News | India Condoles Iran Supreme Leader Khamenei’s Death Foreign Secretary Meets Iran Ambassador

ನವದೆಹಲಿ, ಮಾರ್ಚ್ 5: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯ ನಿಧನಕ್ಕೆ ಭಾರತ ಸಂತಾಪ ಸೂಚಿಸಿದೆ. ಭಾರತದ ಪರವಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಅವರ ಸಂತಾಪ ಸೂಚಿಸುವ ಪುಸ್ತಕಕ್ಕೆ ಸಹಿ ಹಾಕಿದ್ದಾರೆ. ಇಸ್ಲಾಮಿಕ್ ಗಣರಾಜ್ಯದ 86 ವರ್ಷದ ಮಾಜಿ ಸರ್ವೋಚ್ಚ ನಾಯಕ ಖಮೇನಿ 1989ರಿಂದ ಇರಾನ್ ದೇಶವನ್ನು ಆಳುತ್ತಿದ್ದರು. ಶನಿವಾರ ಮುಂಜಾನೆ ಅಮೆರಿಕ ಮತ್ತು ಇಸ್ರೇಲ್ ಪ್ರಾರಂಭಿಸಿದ ಜಂಟಿ ಮಿಲಿಟರಿ ಕಾರ್ಯಾಚರಣೆಯಲ್ಲಿ ಅವರನ್ನು ಕೊಲ್ಲಲಾಗಿತ್ತು. ಖಮೇನಿಯ ನಿಧನಕ್ಕೆ ಭಾರತದ ಮೊದಲ ಪ್ರತಿಕ್ರಿಯೆಯ ಭಾಗವಾಗಿ ಮಿಶ್ರಿ ಸಂತಾಪ ಸೂಚಿಸಿದ್ದಾರೆ.

ಖಮೇನಿ ಅವರ ಸಾವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ರಾತ್ರಿ ಟ್ರೂತ್ ಸೋಷಿಯಲ್‌ನಲ್ಲಿ ಮೊದಲು ಘೋಷಿಸಿದ್ದರು. ಇರಾನ್‌ನ ಜನರು ದೇಶದ ಮೇಲೆ ಹಿಡಿತ ಸಾಧಿಸಲು ಇದು ಅತ್ಯಂತ ದೊಡ್ಡ ಅವಕಾಶ ಎಂದು ಟ್ರಂಪ್ ಟ್ರೂತ್ ಸೋಶಿಯಲ್‌ನಲ್ಲಿ ಬರೆದಿದ್ದರು. “ಇತಿಹಾಸದಲ್ಲಿ ಅತ್ಯಂತ ದುಷ್ಟ ಜನರಲ್ಲಿ ಒಬ್ಬರಾದ ಖಮೇನಿ ನಿಧನರಾಗಿದ್ದಾರೆ. ಇದು ಇರಾನ್‌ನ ಜನರಿಗೆ ಮಾತ್ರವಲ್ಲ, ಎಲ್ಲಾ ಮಹಾನ್ ಅಮೆರಿಕನ್ನರಿಗೆ ಮತ್ತು ಖಮೇನಿಯಿಂದ ಕೊಲ್ಲಲ್ಪಟ್ಟ ಅಥವಾ ಅಂಗವಿಕಲರಾದ ಪ್ರಪಂಚದಾದ್ಯಂತದ ಅನೇಕ ದೇಶಗಳ ಜನರಿಗೆ ಸಿಕ್ಕ ನ್ಯಾಯವಾಗಿದೆ” ಎಂದು ಟ್ರಂಪ್ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ಎಲ್ಲೇ ಅಡಗಿದ್ದರೂ ಬಿಡೋದಿಲ್ಲ; ಖಮೇನಿಯ ಉತ್ತರಾಧಿಕಾರಿಯನ್ನು ಕೊಲ್ಲುತ್ತೇವೆಂದ ಇಸ್ರೇಲ್

ಖಮೇನಿ ಸಾವನ್ನಪ್ಪಿದ ವಾಯುದಾಳಿಯನ್ನು ಖಂಡಿಸದ ಮತ್ತು ಯಾವುದೇ ಹೇಳಿಕೆ ಬಿಡುಗಡೆ ಮಾಡದೆ ಮೌನವನ್ನು ಕಾಯ್ದುಕೊಂಡಿದ್ದ ಭಾರತ ಕೊನೆಗೂ ಖಮೇನಿ ಸಾವಿಗೆ ಸಂತಾಪ ಸೂಚಿಸಿದೆ. ಆದರೆ, ಶಾಂತಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಮೋದಿ ಕರೆ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *