ಖುಲಾಯಿಸಲಿದೆಯಾ ಅದೃಷ್ಟ… ಟಿ20 ವಿಶ್ವಕಪ್​ಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ – Kannada News | T20 World Cup 2026: Shreyas Iyer in line to replace injured Tilak Varma

ಟಿ20 ವಿಶ್ವಕಪ್​ಗೆ 15 ಸದಸ್ಯರುಗಳ ಭಾರತ ತಂಡವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಸ್ಥಾನ ಪಡೆದಿದ್ದ ಟೀಮ್ ಇಂಡಿಯಾದ ಎಡಗೈ ದಾಂಡಿಗ ತಿಲಕ್ ವರ್ಮಾ ಗಾಯಗೊಂಡಿದ್ದಾರೆ. ಈ ಗಾಯದ ಕಾರಣ ಅವರು ಮುಂಬರುವ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

ಏಕೆಂದರೆ ತೊಡೆಸಂಧು ಗಾಯದ ಸಮಸ್ಯೆಗೆ ಒಳಗಾಗಿರುವ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿರುವುದು ಖಚಿತವಾಗಿದೆ. ಆ ಬಳಿಕ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಅವರು ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಒಂದು ವೇಳೆ ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯದಿದ್ದರೆ ಅವರನ್ನು ಟಿ20 ವಿಶ್ವಕಪ್​​ನಿಂದ ಕೈ ಬಿಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಟಿ20 ವಿಶ್ವಕಪ್ ಶುರುವಾಗುವುದು ಫೆಬ್ರವರಿ 7 ರಿಂದ. ಅದರೊಳಗೆ ತಿಲಕ್ ವರ್ಮಾ ಸಂಪೂರ್ಣ ಫಿಟ್​ನೆಸ್ ಸಾಧಿಸಬೇಕು.

ಇತ್ತ ನ್ಯೂಝಿಲೆಂಡ್ ವಿರುದ್ಧದ ಸರಣಿ ವೇಳೆ ಅವರು ಫಿಟ್​ನೆಸ್ ಸಾಧಿಸಲು ಸಾಧ್ಯವಾಗದೇ ಇದ್ದರೆ ಬಿಸಿಸಿಐ ಆಯ್ಕೆ ಸಮಿತಿ ಬದಲಿ ಆಟಗಾರನ ಮೊರೆ ಹೋಗಲಿದ್ದಾರೆ. ಹೀಗೆ ಬದಲಿ ಆಟಗಾರನಾಗಿ ಎಂಟ್ರಿ ಕೊಡಲು ಇತ್ತ ಶ್ರೇಯಸ್ ಅಯ್ಯರ್ ಸಜ್ಜಾಗಿದ್ದಾರೆ.

ಶ್ರೇಯಸ್ ಅಯ್ಯರ್ ಮಧ್ಯಮ ಕ್ರಮಾಂಕದ ಬ್ಯಾಟರ್. ಈಗಾಗಲೇ ಟಿ20 ಕ್ರಿಕೆಟ್​ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಹೀಗಾಗಿ ತಿಲಕ್ ವರ್ಮಾ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದರೆ ಶ್ರೇಯಸ್ ಅಯ್ಯರ್​ಗೆ ಚಾನ್ಸ್ ಸಿಗಬಹುದು. ಹೀಗೆ ಅದೃಷ್ಟ ಖುಲಾಯಿಸಿದರೆ ಶ್ರೇಯಸ್ ಅಯ್ಯರ್ ಮುಂಬರುವ ಟಿ20 ವಿಶ್ವಕಪ್​ನಲ್ಲೂ ತಿಲಕ್ ವರ್ಮಾ ಬದಲಿಗೆ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಟಿ20 ವಿಶ್ವಕಪ್​​​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Published On – 2:27 pm, Thu, 8 January 26

Source link

Leave a Reply

Your email address will not be published. Required fields are marked *