ಯಾದಗಿರಿ, ಫೆಬ್ರವರಿ 23: ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫೆ. 21ರಂದು ಜಿಲ್ಲೆಯ ಗುರುಮಠಕಲ್ನಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್ ಭಾಷಣದ ವಿಡಿಯೋ ಇದೀಗ ವೈರಲ್ ಆಗಿದೆ. ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳುವುದಿಲ್ಲ. ಜವಾಹರ ಲಾಲ್ ನೆಹರುರನ್ನು ಮೊದಲ ಪ್ರಧಾನಿ ಎಂದು ಒಪ್ಪಿಕೊಳ್ಳಲ್ಲ ಎಂದು ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
