Headlines

ಗಾಜಿಯಾಬಾದ್: ಮಣಿಕಟ್ಟು ಸೀಳಿಕೊಂಡು ಅಪಾರ್ಟ್​ಮೆಂಟ್​ನ 11ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಯುವಕ – Kannada News | Ghaziabad Tragedy: 28 Year Old Man Dies After Fall From Residential Building

ಗಾಜಿಯಾಬಾದ್, ಜನವರಿ 13: ಯುವಕನೊಬ್ಬ ಮಣಿಕಟ್ಟು ಸೀಳಿಕೊಂಡು ಅಪಾರ್ಟ್​ಮೆಂಟ್​(Apartment)ನ 11ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. 11 ನೇ ಮಹಡಿಯಲ್ಲಿರುವ ತನ್ನ ಮನೆಯ ಬಾಲ್ಕನಿಯಿಂದ ಹಾರಿ 28 ವರ್ಷದ ಯಜ್ಞ ಪಾಂಡೆ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇಂದಿರಾಪುರಂನ ಸೊಸೈಟಿಯೊಂದರ ನಿವಾಸಿಯಾಗಿರುವ ಯಜ್ಞ ಪಾಂಡೆ ಸೋಮವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಜಾಹೀರಾತು ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪಾಂಡೆ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ. ಇಲ್ಲಿಯವರೆಗೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಮತ್ತು ಆತ್ಮಹತ್ಯೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಅವರು ತಮ್ಮ ತಾಯಿ, ತಂದೆ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅವರ ತಂದೆ ಮಾಧ್ಯಮ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.

ಮತ್ತಷ್ಟು ಓದಿ:ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಸಕರು ಕೆಲಸದಿಂದ ವಜಾ

ಮತ್ತೊಂದು ಘಟನೆ

ಶಾಲೆಗೆ ಹೋಗು ಎಂದದ್ದಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
ಬಾಲಕ ಜಗದೀಶನ ತಾಯಿಯ ಕುಟುಂಬ ಅಯ್ಯಪ್ಪ ಮಾಲೆ ಹಾಕಿದ್ದರು. ಈ ಸಂಬಂಧ ಅಲ್ಲಿಗೆ ಹೋಗಿ ಜಗದೀಶ್ ವಾಪಸ್ ಬಂದಿದ್ದ. ನಂತರ ಶಾಲೆಗೆ ಹೋಗಲು ನಿರಾಕರಿಸಿದ್ದ. ಇದರಿಂದ ತಂದೆ ಬುದ್ದಿವಾದ ಹೇಳಿದ್ದಕ್ಕೆ ಶಾಲೆಗೆ ತೆರಳಿದ್ದ ಬಾಲಕ ಗೆಳೆಯನ ಜೊತೆಗೆ ಮನೆಗೆ ವಾಪಸ್ ಬರುವಾಗ ಗೆಳೆಯನನ್ನು ಕಳಿಸಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಚೆನ್ನಕಾಟಯ್ಯನ ಗುಡ್ಲು ಗ್ರಾಮದಲ್ಲಿ ಜಗದೀಶ್ (14) ಎಂಬ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:49 am, Tue, 13 January 26

Source link

Leave a Reply

Your email address will not be published. Required fields are marked *