Headlines

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ ಆಹ್ವಾನ: ಸಿಎಂ ಡಿಕೆಶಿ ಮಾಹಿತಿ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ ಆಹ್ವಾನ: ಸಿಎಂ ಡಿಕೆಶಿ ಮಾಹಿತಿ

ಬೆಂಗಳೂರು, ಜೂನ್​​ 14: ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಫಲಾನುಭವಿಗಳಿಗೆ ಸೂಚಿಸಿದ್ದಾರೆ. ನಿಜವಾದ ಫಲಾನುಭವಿಗಳನ್ನು ಗುರುತಿಸುವ ಹಾಗೂ ಯೋಜನೆಯ ದುರ್ಬಳಕೆ ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ನೂರಾರು ಕೋಟಿ ರೂಪಾಯಿ ಈಗಾಗಲೇ ಮೃತಪಟ್ಟವರ ಖಾತೆಗಳಿಗೆ ಹೋಗಿರುವುದು ಪತ್ತೆಯಾಗಿದ್ದು, ಫಲಾನುಭವಿಗಳ ಬ್ಯಾಂಕ್ ಮಾಹಿತಿ ಸ್ಪಷ್ಟವಾಗಿ ಲಭ್ಯವಾಗಬೇಕಿದೆ ಎಂದು ಅವರು ಹೇಳಿದ್ದಾರೆ. ಅದೇ ರೀತಿ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ 1.64 ಲಕ್ಷ ಜನರೂ ಸಹ ಮರು ಅರ್ಜಿ ಸಲ್ಲಿಸಬೇಕು ಎಂದೂ ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *