ತುಮಕೂರು, ಜುಲೈ 05: ಎಸ್ಐಆರ್ (Special Intensive Revision) ಕರ್ತವ್ಯಕ್ಕೆ ತೆರಳುತ್ತಿದ್ದಾಗ ಗೂಳೂರು ಬಳಿ ನಡೆದ ಅಪಘಾತದಲ್ಲಿ ಭುವನಾ ಮೃತಪಟ್ಟಿದ್ದ ಭುವನಾ ಅವರ ಮದುಗೆ ಕುಟುಂಬ ಸಿದ್ಧತೆ ನಡೆಸುತ್ತಿತ್ತು ಎಂಬ ವಿಚಾರವೀಗ ಬಹಿರಂಗೊಂಡಿದೆ. ಮನೆಮಗಳ ವಿವಾಹದ ಕನಸು ಕಂಡಿದ್ದ ಕುಟುಂಬಕ್ಕೆ ಘಟನೆಯಿಂದ ಬರಸಿಡಿಲು ಬಡಿದಂತಾಗಿದ್ದು, ಮತ್ತೊಂದೆಡೆ ಸರ್ಕಾರಿ ನೌಕರರ ಹೋರಾಟವೂ ತೀವ್ರಗೊಂಡಿದೆ. ತುಮಕೂರು ಡಿಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸಿರುವ ನೌಕರರು, ಭುವನಾ ಸಾವಿಗೆ ನ್ಯಾಯ ನೀಡುವಂತೆ ಆಗ್ರಹಿಸಿದ್ದಾರೆ. ಮೇಲಧಿಕಾರಿಗಳ ಒತ್ತಡವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಜಿಲ್ಲಾಧಿಕಾರಿಗಳ ವರ್ಗಾವಣೆಗೂ ಬಿಗಿಪಟ್ಟು ಹಿಡಿದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.