ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಸಿನಿಮಾ ನಿರ್ಮಾಪಕರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದ್ದು, ಅದಕ್ಕೆ ನಿರ್ಮಾಪಕ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಸುದೀಪ್ (Kichcha Sudeep) ಜೊತೆ ಚಂದ್ರಚೂಡ್ ಆಪ್ತವಾಗಿದ್ದಾರೆ. ಆ ಕುರಿತು ಕೂಡ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ‘ಚಂದ್ರಚೂಡ್ ವೈಯಕ್ತಿಕ ವಿಷಯಗಳನ್ನು ನಾವು ಮಾತನಾಡಿಲ್ಲ. ಚಿತ್ರರಂಗದ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಯಾವ ನಿರ್ಮಾಪಕರು ಕೂಡ ಮೋಸ ಮಾಡಿಲ್ಲ. ಚಿತ್ರರಂಗಕ್ಕೆ ನಿನ್ನ ಕೊಡುಗೆ ಏನಿದೆ? ಸುದೀಪ್ ಕೂಡ ನಿರ್ಮಾಪಕ ಅಲ್ವಾ? ನಿರ್ಮಾಪಕರ ಬಗ್ಗೆ ಚಂದ್ರಚೂಡ್ ಈ ರೀತಿ ಮಾತನಾಡಿದ್ದು ಸುದೀಪ್ ಅವರಿಗೆ ಗೊತ್ತಾದರೆ ಸುಮ್ಮನೆ ಇರುತ್ತಾರಾ? ಆ ಬಗ್ಗೆ ನಾನು ಮಾತನಾಡಿದ್ದರಲ್ಲಿ ತಪ್ಪು ಏನಿದೆ’ ಎಂದು ಕೆ. ಮಂಜು (K Manju) ಅವರು ಪ್ರಶ್ನಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.