ನಟ ರಣ್ವೀರ್ ಸಿಂಗ್ (Ranveer Singh) ಕೆಲ ತಿಂಗಳ ಹಿಂದೆ ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ಕಾಂತಾರ’ ಸಿನಿಮಾದ ಅನುಕರಣೆ ಮಾಡುತ್ತಾ ತುಳು ನಾಡಿನ ದೈವವನ್ನು ಕೆಟ್ಟದಾಗಿ ಅನುಕರಣೆ ಮಾಡಿದ್ದರು. ಅದರ ವಿರುದ್ಧ ಪ್ರಕರಣ ದಾಖಲಾಗಿ, ಕರ್ನಾಟಕ ಹೈಕೋರ್ಟ್ನಲ್ಲಿ ವಿಚಾರಣೆ ಸಹ ನಡೆದಿತ್ತು. ನ್ಯಾಯಾಲಯವು, ರಣ್ವೀರ್ ಸಿಂಗ್ ಮಾಡಿದ್ದು ತಪ್ಪೆಂದು ಅಭಿಪ್ರಾಯ ವ್ಯಕ್ತಪಡಿಸಿ, ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿ ಕ್ಷಮೆ ಕೇಳಬೇಕೆಂದು ಸೂಚಿಸಿತ್ತು. ಅಂತೆಯೇ ಇದೀಗ ನಟ ರಣ್ವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ದೈವಕ್ಕೆ ಅಪಮಾನ ಎಸಗಿದ್ದಕ್ಕೆ ಕ್ಷಮೆ ಕೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ