ಚಿಕ್ಕಮಗಳೂರು, ಜುಲೈ 7: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಮಳೆ ದಾಖಲಾಗಿದೆ. ಪಶ್ಚಿಮ ಘಟ್ಟದ ಈ ಪ್ರದೇಶದಲ್ಲಿ ಒಂದು ಕಡೆ ರಣಮಳೆ ಸುರಿಯುತ್ತಿದ್ದರೆ, ಮತ್ತೊಂದು ಕಡೆ ಇಡೀ ಘಾಟಿ ಪ್ರದೇಶವನ್ನು ದಟ್ಟವಾದ ಮಂಜು ಆವರಿಸಿಕೊಂಡಿದೆ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 173 (NH 173) ರ ಈ ಕಿರಿದಾದ ರಸ್ತೆಯಲ್ಲಿ ಮಳೆ ಮತ್ತು ಮಂಜಿನ ಕಾರಣದಿಂದಾಗಿ ಎದುರುಗಡೆ ಬರುವ ವಾಹನಗಳು ಸರಿಯಾಗಿ ಕಾಣಿಸದೆ ಸವಾರರು ಸಂಚಾರ ನಡೆಸಲು ತೀವ್ರ ಕಷ್ಟಪಡುತ್ತಿದ್ದಾರೆ. ಸದ್ಯ ಘಾಟಿ ಇಡೀ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಳೆಯಿಂದಾಗಿ ಘಾಟಿ ರಸ್ತೆಯ ಬದಿಗಳಲ್ಲಿ ಜಲಪಾತಗಳು ಸೃಷ್ಟಿಯಾಗಿದ್ದು ಪ್ರಯಾಣಿಕರು ಹಾಗೂ ಪ್ರವಾಸಿಗರನ್ನು ಸೆಳೆಯುತ್ತಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ