ಚಿಕ್ಕಬಳ್ಳಾಪುರದಲ್ಲಿ ದೊಡ್ಡ ಹೈಡ್ರಾಮ: ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ – Kannada News | JDS Workers throws slipper On Congress MLA Pradeep Eshwar In Chikkaballapur

ಚಿಕ್ಕಬಳ್ಳಾಪುರ, (ಜೂನ್ 27): ಚಿಕ್ಕಬಳ್ಳಾಪುರದಲ್ಲಿ (Chikkaballapur) ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆಯುತ್ತಿದ್ದ ಕೆಂಪೇಗೌಡ ಕಾರ್ಯಕ್ರಮಕ್ಕೆ  ನುಗ್ಗಿದ ಜೆಡಿಎಸ್ ಕಾರ್ಯಕರ್ತರು, ಪ್ರದೀಪ್ ಈಶ್ವರ್ ಅವರನ್ನ ವೇದಿಕೆಯಿಂದ ಕೆಳಗಿಳಸಬೇಕೆಂದು ಗಲಾಟೆ ಮಾಡಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದು, ಬಳಿಕ ಸ್ವಾಮೀಜಿ ಮಧ್ಯೆ ಪ್ರವೇಶಿಸಿ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು. ಇದಾದ ನಂತರ ಪ್ರದೀಪ್ ಈಶ್ವರ್, ತಮ್ಮ ವಿರುದ್ಧ ಘೋಷಣೆ ಕೂಗಿದ ಜೆಡಿಎಸ್ ಕಾರ್ಯಕರ್ತರಿಗೆ ಮೀಸೆ ತಿರುವಿ ತೋಳು ತಟ್ಟಿ ತಿರುಗೇಟು ನೀಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿದ್ದಾರೆ. ಪ್ರದೀಪ್ ಈಶ್ವರ್ ಕಾರಿನ ಸನ್​ ರೂಫ್​​​​ ಮೂಲಕ ಮೆರವಣಿಗೆ ತೆರಳುತ್ತಿದ್ದ ವೇಳೆ ಕೆಲವರು ಚಪ್ಪಲಿ ಎಸೆದಿದ್ದು, ಕೂಡಲೇ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ನೋಡಿ: ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ, ಪೊಲೀಸರಿಂದ ಲಘು ಲಾಠಿ ಚಾರ್ಜ್

Source link

Leave a Reply

Your email address will not be published. Required fields are marked *