ಚಿಕ್ಕಬಳ್ಳಾಪುರ: ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ

ಚಿಕ್ಕಬಳ್ಳಾಪುರ: ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ

ಚಿಕ್ಕಬಳ್ಳಾಪುರ, ಏಪ್ರಿಲ್ 4: ಗಲ್ಫ್ ರಾಷ್ಟ್ರಗಳಲ್ಲಿನ ಯುದ್ಧದ ಕಾರಣದಿಂದ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಅಭಾವ ಉಂಟಾಗಿ, ಬಹುತೇಕ ದೊಡ್ಡ ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಪರಿಸ್ಥಿತಿಯು ಚಿಕ್ಕಬಳ್ಳಾಪುರ ಜಿಲ್ಲೆಯ ಆಲೂಗಡ್ಡೆ ಬೆಳೆಗಾರರಿಗೆ ತೀವ್ರ ಸಂಕಷ್ಟ ತಂದೊಡ್ಡಿದೆ. ರೈತರು ಮಗುವಿನಂತೆ ಆರೈಕೆ ಮಾಡಿ ಬೆಳೆದ ಆಲೂಗಡ್ಡೆಗೆ ಉತ್ತಮ ಬೆಲೆ ಸಿಗದೆ ಪರದಾಡುತ್ತಿದ್ದಾರೆ. ಕಳೆದ ಹದಿನೈದು ದಿನಗಳಿಂದ ಕೊಯ್ಲು ಮಾಡಿದ ಆಲೂಗಡ್ಡೆಯನ್ನು ಸಂಗ್ರಹಿಸಿಟ್ಟರೂ, ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲದೆ ಮತ್ತು ಹೋಟೆಲ್‌ಗಳು ತೆರೆಯದ ಕಾರಣ ಮಾರಾಟವಾಗುತ್ತಿಲ್ಲ. ಚಿಕ್ಕಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ, ಅತ್ಯುತ್ತಮ ಗುಣಮಟ್ಟದ ಆಲೂಗಡ್ಡೆ (52 ಕೆ.ಜಿ. ಮೂಟೆ) ಕೇವಲ 300 ರೂಪಾಯಿಗೆ ಮಾರಾಟವಾಗುತ್ತಿದ್ದು, ಕಳಪೆ ಗುಣಮಟ್ಟದ ಆಲೂಗಡ್ಡೆಗೆ 20 ರಿಂದ 50 ರೂಪಾಯಿ ಮಾತ್ರ ಸಿಗುತ್ತಿದೆ. ಇದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *