ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ಶ್ರೀಗಳ ನೇತೃತ್ವದಲ್ಲಿ ತುಲಾಭಾರ

ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ಶ್ರೀಗಳ ನೇತೃತ್ವದಲ್ಲಿ ತುಲಾಭಾರ

ಬೆಳಗಾವಿ, ಮಾರ್ಚ್​ 28: ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಯಡೂರ ಗ್ರಾಮದ ಕಾಡಸಿದ್ದೇಶ್ವರ ಮಠದಲ್ಲಿ ನಡೆದ ವಿದ್ಯಾರ್ಥಿಗಳ ಯುವ ಸಮಾವೇಶದಲ್ಲಿ ಆರ್​​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್​​ ಭಾಗವಹಿಸಿದ್ದರು. ಬಳಿಕ ಚಿಕ್ಕೋಡಿ ತಾಲೂಕಿನ ಯಡೂರಿನ ಕಾಡಸಿದ್ದೇಶ್ವರ ಮಠದಿಂದ ಮೋಹನ್ ಭಾಗವತ್​​​ರ ತುಲಾಭಾರ ಮಾಡಲಾಗಿದೆ. ಶ್ರೀಶೈಲ ಜಗದ್ಗುರು ಚನ್ನರಾಮಸಿದ್ಧ ಶ್ರೀಗಳ ನೇತೃತ್ವದಲ್ಲಿ ಗೋವುಗಳಿಗೆ ನೀಡುವ ಆಹಾರ ಪದಾರ್ಥಗಳಿಂದ ತುಲಾಭಾರ ಮಾಡಲಾಗಿದೆ. ಬಳಿಕ ಮೋಹನ್ ಭಾಗವತ್ ಗೋವುಗಳಿಗೆ ಮೇವು ಹಾಕಿ ಗೋ ಪೂಜೆ ನೆರವೇರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *