ಚಿತ್ರದುರ್ಗ, ಆಗಸ್ಟ್ 14: ಕರ್ನಾಟಕದ ‘ಸ್ಪೈಡರ್ಮ್ಯಾನ್’ ಎಂದೇ ಜನಪ್ರಿಯರಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಅವರ ವಿವಾಹ ಮುಹೂರ್ತ ನಿಶ್ಚಯವಾಗಿದ್ದು, ಚಿತ್ರದುರ್ಗ ಸಮೀಪದ ಚಳ್ಳಕೆರೆಯ ದೊಡ್ಡಉಳ್ಳಾರ್ತಿ ಗ್ರಾಮದ ನಿವೇದಿತಾ ಎಂಬುವವರೊಂದಿಗೆ ಆಗಸ್ಟ್ 22 ಮತ್ತು 23ರಂದು ವೈಭವ ಗಾರ್ಡನ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಹಿಂದೆ 2018-19ರಲ್ಲಿ ಜೋಗ್ಫಾಲ್ಸ್ನಲ್ಲಿ ಬಿದ್ದು ಗಾಯಗೊಂಡಿದ್ದ ಸಂದರ್ಭದಲ್ಲಿ ನಿಶ್ಚಯವಾಗಿದ್ದ ಮದುವೆ ರದ್ದಾಗಿತ್ತು. ಇದೀಗ ಬಾಲ್ಯದಿಂದಲೂ ಪರಿಚಿತವಿರುವ ನಿವೇದಿತಾರನ್ನು ಇಷ್ಟಪಟ್ಟು ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಅರೇಂಜ್ಡ್-ಕಮ್-ಲವ್ ಮ್ಯಾರೇಜ್ ಆಗುತ್ತಿರುವುದಾಗಿ ಜ್ಯೋತಿರಾಜ್ ತಿಳಿಸಿದ್ದಾರೆ. ಆರ್ಥಿಕ ಸಂಕಷ್ಟದ ನಡುವೆಯೂ ಸ್ನೇಹಿತರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಭಿಮಾನಿಗಳ ಪ್ರೀತಿ-ಬೆಂಬಲದಿಂದ ಸರಳವಾಗಿ ವಿವಾಹ ಕಾರ್ಯಕ್ರಮ ನೆರವೇರಲಿದೆ ಎಂದು ಮಾಹಿತಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
