ಚಿತ್ರದುರ್ಗ, ಡಿಸೆಂಬರ್ 25: ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಸ್ಲೀಪರ್ ಬಸ್ ಹೊತ್ತಿ ಉರಿದ ಪರಿಣಾಮ ಐವರು ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಬಸ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ. ಘಟನೆ ಬಳಿಕ ಮೂವರು ನಾಪತ್ತೆಯಾಗಿದ್ದು, ಆ ಪೈಕಿ ಈಗ ಒಬ್ಬರ ಪತ್ತೆಯಾಗಿದೆ. ಉಳಿದ ಇಬ್ಬರು ಯುವತಿಯರು ಇನ್ನೂ ಮಿಸ್ಸಿಂಗ್ ಹಿನ್ನೆಲೆ
ಅವರ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿ, ತಮ್ಮ ಮಕ್ಕಳನ್ನು ಹುಡುಕುತ್ತಾ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.