Headlines

ಚಿತ್ರಮಂದಿರಗಳಲ್ಲಿ ‘ಕರಾವಳಿ’ ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಬಿ ಶೆಟ್ಟಿ ಖುಷ್

ಚಿತ್ರಮಂದಿರಗಳಲ್ಲಿ ‘ಕರಾವಳಿ’ ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಬಿ ಶೆಟ್ಟಿ ಖುಷ್

‘ಕರಾವಳಿ’ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಚಿತ್ರಕ್ಕೆ ಸಿಗುತ್ತಿರುವ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ನಟ ರಾಜ್ ಬಿ. ಶೆಟ್ಟಿ ಅವರು ತೀವ್ರ ಹರ್ಷ ವ್ಯಕ್ತಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಭೇಟಿ ನೀಡಿ ಪ್ರೇಕ್ಷಕರ ಸಂಭ್ರಮವನ್ನು ಕಣ್ಣಾರೆ ಕಂಡಿರುವ ಅವರು, ಸಿನಿಮಾವನ್ನು ಇಷ್ಟಪಟ್ಟು ಬೆಂಬಲಿಸುತ್ತಿರುವ ಕನ್ನಡಿಗರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ವಿವಾದಗಳನ್ನೆಲ್ಲ ಬದಿಗೊತ್ತಿ ಚಿತ್ರವನ್ನು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸುತ್ತಿರುವುದು ಇಡೀ ಚಿತ್ರತಂಡದ ಸಂತಸವನ್ನು ಇಮ್ಮಡಿಗೊಳಿಸಿದೆ.

ಕರಾವಳಿ’ ಸಿನಿಮಾ ಗಳಿಕೆ ಕೇವಲ ಮೂರೇ ದಿನಗಳಲ್ಲಿ ನಾಲ್ಕು ಕೋಟಿ ರೂಪಾಯಿಯ ಸಮೀಪಕ್ಕೆ ಬಂದು ತಲುಪಿದೆ. ವೀಕೆಂಡ್‌ನ ಲಾಭವನ್ನು ಸಂಪೂರ್ಣವಾಗಿ ಪಡೆದುಕೊಂಡಿರುವ ಚಿತ್ರದ ಒಟ್ಟು ಇಂಡಿಯಾ ಗ್ರಾಸ್ ಕಲೆಕ್ಷನ್ ಬರೋಬ್ಬರಿ 3.88 ಕೋಟಿ ರೂಪಾಯಿ ದಾಟಿದೆ. ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ, ಮಿತ್ರ ಹಾಗೂ ರಮೇಶ್ ಇಂದಿರ ಅವರ ಅದ್ಭುತ ನಟನೆಗೆ ಪ್ರೇಕ್ಷಕರು ಜೈಕಾರ ಹಾಕುತ್ತಿದ್ದು, ಮುಂಬರುವ ದಿನಗಳಲ್ಲಿ ಚಿತ್ರದ ಗಳಿಕೆ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

Leave a Reply

Your email address will not be published. Required fields are marked *