ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ? RCB ಅಭಿಮಾನಿಗಳಿಗೆ ಸರ್ಕಾರದಿಂದ ಸಿಗುತ್ತಾ ಸಿಹಿ ಸುದ್ದಿ? – Kannada News | Chinnaswamy Stadium IPL Matches: RCB Matches Almost Confirmed, Cabinet Decision Pending

ಬೆಂಗಳೂರು, ಫೆಬ್ರವರಿ 12: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಬಹುತೇಕ ಅನುಮತಿ ದೊರೆತಿದೆ ಎಂದು ಮೂಲಗಳು ತಿಳಿಸಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಿಗೆ ಸಿಹಿಸುದ್ದಿ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ. ವಿಧಾನಸೌಧದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅಧಿಕಾರಿಗಳು ಮೈದಾನ ಪರಿಶೀಲನಾ ವರದಿಯನ್ನು ಸಲ್ಲಿಸಿದ್ದು, ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಗಳಿಗೆ ಷರತ್ತುಗಳೊಂದಿಗೆ ಸಹಮತ ನೀಡುವ ಸಾಧ್ಯತೆ ದಟ್ಟವಾಗಿದೆ. ಹಿಂದಿನ ದುರಂತದ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲು ಅನುಮತಿ ಇರಲಿಲ್ಲ. ಆದರೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧಿಕಾರಿಗಳು ನ್ಯಾಯಮೂರ್ತಿ ಕುನ್ನ ಅವರ ವರದಿಯ ಶಿಫಾರಸುಗಳನ್ನು ಸಂಪೂರ್ಣವಾಗಿ ಪಾಲಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *