ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ; ನಾಳೆಯೇ ತುರ್ತು ವಿಚಾರಣೆ – Kannada News | TMC Moves to Supreme Court Against Election Commission order to use central staff hearing tomorrow

ನವದೆಹಲಿ, ಮೇ 1: ಪಶ್ಚಿಮ ಬಂಗಾಳ ಚುನಾವಣೆಯ (West Bengal Elections) ಫಲಿತಾಂಶಕ್ಕೆ ಎರಡು ದಿನಗಳ ಮೊದಲು, ಶನಿವಾರ ತುರ್ತು ವಿಚಾರಣೆ ನಡೆಸಲು ಕೋರಿ ಟಿಎಂಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರಿ ನೌಕರರನ್ನು ಮೇಲ್ವಿಚಾರಕರಾಗಿ ನೇಮಿಸುವುದನ್ನು ಪ್ರಶ್ನಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಕೊಲ್ಕತ್ತಾ ಹೈಕೋರ್ಟ್ ವಜಾಗೊಳಿಸಿದ ನಂತರ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆಹೋಗಿದೆ. ಶನಿವಾರ ಬೆಳಿಗ್ಗೆ 10.30ಕ್ಕೆ ವಿಚಾರಣೆ ನಡೆಯಲಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಶನಿವಾರ ಈ ವಿಷಯದ ತುರ್ತು ವಿಚಾರಣೆಗೆ ನಿರ್ದೇಶನಗಳನ್ನು ನೀಡಿದ್ದಾರೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠದ ಮುಂದೆ ಅರ್ಜಿಯನ್ನು ಪಟ್ಟಿ ಮಾಡಲಾಗುವುದು.

ಇದನ್ನೂ ಓದಿ: West Bengal Election Exit Poll Results 2026: ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಭಾರೀ ಹಿನ್ನಡೆ; ಬಿಜೆಪಿಗೆ 146-175 ಸ್ಥಾನಗಳ ನಿರೀಕ್ಷೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆಗಾಗಿ ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕ ವಲಯದ ನೌಕರರನ್ನು ನಿಯೋಜಿಸಬೇಕೆಂಬ ಭಾರತದ ಚುನಾವಣಾ ಆಯೋಗದ ನಿರ್ದೇಶನವನ್ನು ಪ್ರಶ್ನಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿತ್ತು. ಕೇಂದ್ರ ಸರ್ಕಾರ/ಪಿಎಸ್‌ಯು ನೌಕರರನ್ನು ಮೇಲ್ವಿಚಾರಕರು/ಸಹಾಯಕರಾಗಿ ಪರಿಗಣಿಸಬೇಕೆಂಬ ನಿರ್ಧಾರದ ಸಿಂಧುತ್ವವನ್ನು ಕೊಲ್ಕತ್ತಾ ನ್ಯಾಯಾಲಯ ಎತ್ತಿಹಿಡಿದಿದ್ದು, ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *