ಹಾಸನ, (ಜುಲೈ 20): ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಕಣ್ಣನ್ ಸ್ವಾಮಿ ನೇತೃತ್ವದಲ್ಲಿ ಅಂತಿಮ ಸಂಸ್ಕಾರದ ವಿಧಿವಿಧಾನಗಳು ಆರಂಭವಾಗಿವೆ. ಸಮಾಧಿ ಸ್ಥಳದಲ್ಲಿ ಮಂತ್ರಘೋಷಗಳು ಮೊಳಗುತ್ತಿದ್ದು, ಸಮಾದಿ ಸ್ಥಳಕ್ಕೆ ಕುಮಾರಸ್ವಾಮಿ ಸೇರಿದಂತೆ ಕುಟುಂಬಸ್ಥರು ಆಗಮಿಸಿದ್ದಾರೆ. ಇನ್ನು ಕಿರಿಯ ಪುತ್ರ ಡಾ ರಮೇಶ್ ಅವರು ತಾಯಿ ಚೆನ್ನಮ್ಮನವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುತ್ತಿದ್ದಾರೆ.