Headlines

‘ಜಂತರ್ ಮಂತರ್‌ನಲ್ಲಿ ಯಾವ ಗುಂಡಿನ ದಾಳಿಯೂ ನಡೆದಿಲ್ಲ’; ರಾಹುಲ್ ಗಾಂಧಿಗೆ ಸಚಿವ ಜೆ.ಪಿ. ನಡ್ಡಾ ತಿರುಗೇಟು – Kannada News | No firing at Jantar Mantar JP Nadda counters Rahul Gandhi

ನವದೆಹಲಿ, ಆಗಸ್ಟ್ 10: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಯಾವುದೇ ಗುಂಡಿನ ದಾಳಿ ಅಥವಾ ಪೆಲೆಟ್ ಗನ್ ಪ್ರಯೋಗ ನಡೆದಿಲ್ಲ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda) ಸ್ಪಷ್ಟಪಡಿಸಿದ್ದು, ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ದೇಶದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಧಿವೇಶನದ ಆರಂಭದಲ್ಲಿ ರಾಹುಲ್ ಗಾಂಧಿ ನೀಟ್ (NEET) ಕುರಿತು ಚರ್ಚೆಗೆ ಪಟ್ಟು ಹಿಡಿದಿದ್ದರು. ಸರ್ಕಾರ ಅದಕ್ಕೆ ಒಪ್ಪಿಕೊಂಡಾಗ ರಾಮಮಂದಿರ ಟ್ರಸ್ಟ್ ವಿಷಯ ಎತ್ತಿದರು. ನಂತರ ಜಂತರ್ ಮಂತರ್ ಘಟನೆಯ ಕುರಿತು ಪ್ರಸ್ತಾಪಿಸಿ ದಿನಕ್ಕೊಂದು ನಿರೂಪಣೆ ಬದಲಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಷಯಗಳನ್ನು ಬದಲಾಯಿಸುತ್ತಾ ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸದನ ನಡೆಯದಂತೆ ತಡೆಯುವುದೇ ಅವರ ಮುಖ್ಯ ಉದ್ದೇಶವಾಗಿದೆ ಎಂದು ಜೆ.ಪಿ ನಡ್ಡಾ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಆರಂಭದಲ್ಲಿ ನೀಟ್ (NEET) ಕುರಿತು ಚರ್ಚೆಗೆ ಆಗ್ರಹಿಸಿದ್ದರು. ಆದರೆ, ಸರ್ಕಾರ ಅದಕ್ಕೆ ಒಪ್ಪಿಕೊಂಡಾಗ ತಮ್ಮ ಬೇಡಿಕೆಯನ್ನು ಬದಲಾಯಿಸಿ, ರಾಮಮಂದಿರ ಟ್ರಸ್ಟ್ ಮತ್ತು ಜಂತರ್ ಮಂತರ್ ಘಟನೆಯನ್ನು ಪ್ರಸ್ತಾಪಿಸಿದರು ಎಂದು ಆರೋಗ್ಯ ಸಚಿವ ಜೆ.ಪಿ ನಡ್ಡಾ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ವಿಧೇಯಕದ ಕುರಿತು ರಾಹುಲ್ ಗಾಂಧಿ- ಸಚಿವ ಕಿರಣ್ ರಿಜಿಜು ನಡುವೆ ತೀವ್ರ ವಾಕ್ಸಮರ

“ರಾಹುಲ್ ಗಾಂಧಿ ಸಂಸತ್ತಿನಲ್ಲಿ ದಿನಕ್ಕೊಂದು ವಿಷಯವನ್ನು ಬದಲಾಯಿಸುತ್ತಿದ್ದಾರೆ. ಮಾತುಕತೆ ನಡೆಸುವುದು ಅವರ ಉದ್ದೇಶವಲ್ಲ; ಗೊಂದಲ ಸೃಷ್ಟಿಸುವುದಾಗಿದೆ. ಅಧಿವೇಶನದ ಆರಂಭದಲ್ಲಿ ಅವರು ನೀಟ್ ಕುರಿತು ಚರ್ಚೆಗೆ ಆಗ್ರಹಿಸಿದರು. ನಾವು ಅದಕ್ಕೆ ಒಪ್ಪಿದಾಗ ರಾಮಮಂದಿರ ಟ್ರಸ್ಟ್ ವಿಷಯ ಎತ್ತಿದರು, ನಂತರ ಜಂತರ್ ಮಂತರ್ ಘಟನೆಯ ಕುರಿತು ಗೃಹ ಸಚಿವರೇ ಹೇಳಿಕೆ ನೀಡಬೇಕೆಂದು ಪಟ್ಟು ಹಿಡಿದರು. ಸದನ ನಡೆಯಬಾರದು ಎಂಬುದೇ ಅವರ ಉದ್ದೇಶ” ಎಂದಿದ್ದಾರೆ.

“ಅವರಿಗೆ ಸದನ ನಡೆಯುವುದು ಬೇಕಾಗಿಲ್ಲ. ಅದಕ್ಕಾಗಿಯೇ ಅವರು ಕಳೆದ 15 ದಿನಗಳಿಂದ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆ” ಎಂದು ಹೇಳಿದ ಜೆಪಿ ನಡ್ಡಾ, ಜಂತರ್ ಮಂತರ್ ವಿಷಯದ ಬಗ್ಗೆ ಚರ್ಚಿಸಲು ಸರ್ಕಾರ ಒಪ್ಪಿಕೊಂಡಾಗ, ರಾಹುಲ್ ಗಾಂಧಿ ಅಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸಲು ಪ್ರಾರಂಭಿಸಿದರು ಎಂದು ಆರೋಪಿಸಿದರು.

ಇದನ್ನೂ ಓದಿ: ‘ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ’; ತಮ್ಮದೇ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಟೀಕೆ

“ಇಂದು ಜಂತರ್ ಮಂತರ್ ವಿಷಯದ ಬಗ್ಗೆ ಚರ್ಚಿಸಲು ನಿರ್ಧರಿಸಿದಾಗ ಅಲ್ಲಿ ಯಾವುದೇ ಅಂತಹ ಘಟನೆ ನಡೆಯದಿದ್ದರೂ, ಗುಂಡಿನ ದಾಳಿ ನಡೆದಿದೆ ಎಂದು ಹೇಳುವ ಮೂಲಕ ಅವರು ಜನರನ್ನು ಮತ್ತು ದೇಶವನ್ನು ದಾರಿ ತಪ್ಪಿಸಲು ತೊಡಗಿದರು” ಎಂದು ಅವರು ಹೇಳಿದರು.

ಸಂಸತ್ತಿನಲ್ಲಿ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಗೃಹ ಸಚಿವರು ಸಿದ್ಧರಿದ್ದಾರೆ ಎಂದು ಹೇಳಿದ ಜೆಪಿ ನಡ್ಡಾ, “ನಾನು ರಾಹುಲ್ ಗಾಂಧಿಯವರಿಗೆ ಮತ್ತೊಮ್ಮೆ ಸವಾಲು ಹಾಕುತ್ತೇನೆ. ಸದನಕ್ಕೆ ಬನ್ನಿ. ನಾವು ಚರ್ಚೆಗೆ ಸಿದ್ಧರಿದ್ದೇವೆ ಮತ್ತು ನಿಮಗೆ ತಕ್ಕ ಉತ್ತರ ಸಿಗಲಿದೆ. ಅಪಪ್ರಚಾರ ಹರಡಬೇಡಿ. ಜಂತರ್ ಮಂತರ್‌ನಲ್ಲಿ ಯಾವುದೇ ಗುಂಡು ಹಾರಿಸಿಲ್ಲ ಅಥವಾ ಅಲ್ಲಿ ಗುಂಡು ಹಾರಿಸಲು ಯಾವುದೇ ಆದೇಶ ನೀಡಿರಲಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *