ತಮಿಳುನಾಡು ಸಿಎಂ, ನಟ ವಿಜಯ್ (Thalapathy Vijay) ಅವರ ‘ಜನ್ ನಾಯಕನ್’ ಸಿನಿಮಾ ಕೊನೆಗೂ ಬಿಡುಗಡೆ ಕಾಣುತ್ತಿದೆ. ಜನವರಿ ತಿಂಗಳಲ್ಲಿ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈಗ ಏಳು ತಿಂಗಳ ಬಳಿಕ ಜುಲೈ 23ರಂದು ತೆರೆಗೆ ಬರುತ್ತಿದೆ. ಸಿನಿಮಾಕ್ಕೆ ಸೆನ್ಸಾರ್ ಮಂಡಳಿಯಿಂದ ಭಾರಿ ಸಮಸ್ಯೆ ಎದುರಾಗಿತ್ತು. ಸೆನ್ಸಾರ್ ಮಂಡಳಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡುವುದನ್ನೇ ನಿರಾಕರಿಸಿ, ವಿಶೇಷ ಸಮಿತಿಗೆ ಸಿನಿಮಾವನ್ನು ಕಳಿಸಿತ್ತು. ನ್ಯಾಯಾಲಯದಲ್ಲಿ ಹೋರಾಟಗಳನ್ನು ಮಾಡಿ, ಕೊನೆಗೂ ಇದೀಗ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಆದರೆ ಸಿನಿಮಾದ ಹಲವು ಸಂಭಾಷಣೆ, ದೃಶ್ಯಗಳಿಗೆ ಸಿಬಿಎಫ್ಸಿ ಕತ್ತರಿ ಹಾಕಿದೆ. ವಿಶೇಷವಾಗಿ ಅಂಬೆಡ್ಕರ್ ಕುರಿತ ಸಂಭಾಷಣೆಯೊಂದಕ್ಕೂ ಸಹ ಸಿಬಿಎಫ್ಸಿ ಕತ್ತರಿ ಹಾಕಿದ್ದು, ಇದಕ್ಕೆ ಕಾರಣವೇನು ಎಂಬುದನ್ನು ಸಿನಿಮಾದ ನಿರ್ಮಾಪಕ ವೆಂಕಟ್ ವಿವರಿಸಿದ್ದಾರೆ.
ಸಂವಿಧಾನ ಫಾಲೋ ಮಾಡದಿದ್ದರೆ ಏನಾಗುತ್ತದೆ ಎಂಬುದನ್ನು ಸಿನಿಮಾನಲ್ಲಿ ಸರಳವಾದ ಭಾಷೆಯಲ್ಲಿ ವಿವರಿಸಲಾಗಿದೆ. ಸಂವಿಧಾನ ಫಾಲೋ ಮಾಡದಿದ್ದರೆ ಏನಾಗುತ್ತದೆ ಎಂಬುದನ್ನು ಮಕ್ಕಳಿಗೆ ವಿವರಿಸುವ ಸಂಭಾಷಣೆ. ಮಕ್ಕಳಿಗೆ ಅರ್ಥವಾಗುವಂತೆ ಸರಳವಾಗಿ ಹೇಳುವ ಸಂಭಾಷಣೆ ಒಂದು ಸೀನ್ನಲ್ಲಿ ಇತ್ತು. ‘ಅಂಬೇಡ್ಕರ್ ಸಂವಿಧಾನವನ್ನು ಫಾಲೋ ಮಾಡದಿದ್ದರೆ, ಟಿವಿಕೆ ಸಂವಿಧಾನದ ಮೂಲಕ ಪಾಠ ಕಲಿಸಬೇಕಾಗುತ್ತದೆ’ ಎಂಬ ಸಂಭಾಷಣೆ ಸಿನಿಮಾನಲ್ಲಿತ್ತು’ ಎಂದು ವೆಂಕಟ್ ಹೇಳಿದ್ದಾರೆ. ಆದರೆ ಆ ಸಂಭಾಷಣೆಯನ್ನು ಇದೀಗ ಸಿಬಿಎಫ್ಸಿ ಸೂಚನೆ ಮೇರೆಗೆ ತೆಗೆದು ಹಾಕಲಾಗಿದೆಯಂತೆ.
ಸೃಜನಶೀಲ ಸ್ವಾತಂತ್ರ್ಯ ಮತ್ತು ಕಠಿಣ ಸೆನ್ಸಾರ್ ನಿಯಮಗಳ ನಡುವಿನ ಸಮತೋಲನವನ್ನು ಕಾಪಾಡುವುದು ಕಷ್ಟ ಎಂದಿರುವ ನಿರ್ಮಾಪಕ ವೆಂಕಟ್, ‘ಸಿನಿಮಾದಲ್ಲಿನ ಕೆಲವು ರಾಜಕೀಯ ವಿಷಯಗಳ ಉಲ್ಲೇಖ ಮತ್ತು ವ್ಯಕ್ತಿಗಳ ಹೆಸರನ್ನು ಬಳಸುವಾಗ ತುಂಬಾ ಜಾಗರೂಕರಾಗಿರಬೇಕು. ಪ್ರೇಕ್ಷಕರ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ಸಿಬಿಎಫ್ಸಿ ಯಾವ ಯಾವ ಕಟ್ಗೆ ಸೂಚಿಸಿತ್ತೊ ಅದೆಲ್ಲವನ್ನೂ ನಾವು ಪಾಲಿಸಿದ್ದೇವೆ’ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಬಹಿರಂಗವಾಗಿ ವಿಜಯ್, ತ್ರಿಷಾ ಬಗ್ಗೆ ಹಾಸ್ಯ ಮಾಡಿದ ಮಲಯಾಳಂ ನಟ; ವಿಡಿಯೋ ವೈರಲ್
‘ಆದರೆ ಈ ಬದಲಾವಣೆಗ ಸಿಳಿಂದ ಸಿನಿಮಾದ ಮೂಲ ಕಥೆಗೆ ಯಾವುದೇ ಧಕ್ಕೆ ಆಗುವುದಿಲ್ಲ ಎಂದು ಚಿತ್ರತಂಡ ಹೇಳಿದ್ದು, ವಿಜಯ್ ಅವರ ಈ ಚಿತ್ರವು ರಾಜಕೀಯ ಹಿನ್ನೆಲೆಯನ್ನು ಹೊಂದಿದ್ದು, ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಜುಲೈ 23 ರಂದು ಈ ಚಿತ್ರವು ತೆರೆಕಾಣಲಿದ್ದು, ಅಂದು ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ ಎಂದು ಚಿತ್ರತಂಡ ವಿಶ್ವಾಸ ವ್ಯಕ್ತಪಡಿಸಿದೆ. ಆದರೆ ಸಿಬಿಎಫ್ಸಿಯು ಸಮಾಜದ ಬಗ್ಗೆ ಕಾಳಜಿಯಿಂದ ಕಟ್ಟಲಾಗಿರುವ ದೃಶ್ಯ, ಸಂಭಾಷಣೆಗಳಿಗೆ ಕತ್ತರಿ ಹಾಕಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
‘ಜನ ನಾಯಗನ್’ ಸಿನಿಮಾ ಜುಲೈ 23ಕ್ಕೆ ಬಿಡುಗಡೆ ಆಗಲಿದ್ದು, ಸಿನಿಮಾ ಅನ್ನು ಎಚ್ ವಿನೋದ್ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಪೂಜಾ ಹೆಗ್ಡೆ ನಾಯಕಿ. ವಿಜಯ್ ಪಾತ್ರದ ಸಾಕು ಪುತ್ರಿಯಾಗಿ ಮಲಯಾಳಂ ನಟಿ ಮಮಿತಾ ಬೈಜು ನಟಿಸಿದ್ದಾರೆ. ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ನಟಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ