‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಹೊಸ ದಿನಾಂಕ ಲಾಕ್? – Kannada News | Thalapathy Vijay’s last film Jana Nayagan eyeing June release around his birthday

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ (Thalapathy Vijay) ಸದ್ಯ ತಮ್ಮ ವೃತ್ತಿಜೀವನದ ಅತ್ಯಂತ ಮಹತ್ವದ ಘಟ್ಟದಲ್ಲಿದ್ದಾರೆ. ರಾಜಕೀಯಕ್ಕೆ ಧುಮುಕಿರುವ ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ಮುಳುಗುವ ಮುನ್ನ ಕೊನೆಯ ಸಿನಿಮಾನಲ್ಲಿ ನಟಿಸಿದ್ದರು ಅದುವೇ ‘ಜನ ನಾಯಗನ್’. ಸಂಕ್ರಾಂತಿಗೆ ಬಿಡುಗಡೆ ಆಗಬೇಕಿದ್ದ ಈ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡದೇ ಇರುವ ಕಾರಣ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ. ‘ಜನ ನಾಯಗನ್​’ಗೆ ಪ್ರಮಾಣ ಪತ್ರ ನಿರಾಕರಿಸಿರುವ ಹಿಂದೆ ರಾಜಕೀಯ ಕೈವಾಡ ಇದೆ ಎಂಬುದು ಗುಟ್ಟೇನೂ ಅಲ್ಲ. ಆದರೆ ಇದೀಗ ಸಿನಿಮಾದ ಬಿಡುಗಡೆ ಕುರಿತಾಗಿ ಹೊಸದೊಂದು ಅಪ್​​ಡೇಟ್ ಹೊರಬಿದ್ದಿದೆ.

ಪಿಂಕ್‌ವಿಲ್ಲಾ ವರದಿಯ ಪ್ರಕಾರ, ಜನವರಿಯಲ್ಲಿ ಬಿಡುಗಡೆ ಆಗಬೇಕಿದ್ದ ಈ ಸಿನಿಮಾವು ಆರು ತಿಂಗಳು ತಡವಾಗಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ವಿಜಯ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿನಿಮಾವನ್ನು ತೆರೆಗೆ ತರಲು ಪ್ಲಾನ್ ಮಾಡುತ್ತಿದೆ. ಜೂನ್ 22 ರಂದು ವಿಜಯ್ ಅವರ ಜನ್ಮದಿನವಿದ್ದು, ಅದೇ ವಾರದಲ್ಲಿ ಅಂದರೆ ಜೂನ್ 2026 ರ ಸುಮಾರಿಗೆ ‘ಜನ ನಾಯಗನ್’ ವಿಶ್ವಾದ್ಯಂತ ಬಿಡುಗಡೆಯಾಗುವ ಸಾಧ್ಯತೆ ಇದೆಯಂತೆ.

ತಮಿಳುನಾಡು ಚುನಾವಣೆಗೆ ಮುಂಚೆ ಸಿನಿಮಾವನ್ನು ಬಿಡುಗಡೆ ಮಾಡದಂತೆ ತಡೆಯಲು ಹಲವು ಶಕ್ತಿಗಳು ಪ್ರಯತ್ನಿಸುತ್ತಿದ್ದು, ಸಿನಿಮಾದ ನಿರ್ಮಾಪಕರ ಮೇಲೆ ಸಹ ಈ ಬಗ್ಗೆ ಸಾಕಷ್ಟು ಒತ್ತಡ ಇದೆಯಂತೆ. ಇದೇ ಕಾರಣಕ್ಕೆ ನಿರ್ಮಾಪಕರು ಸಹ ಚುನಾವಣೆ ಮುಗಿದ ಬಳಿಕ ಜೂನ್ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಮಾನಸಿಕವಾಗಿ ಸಿದ್ಧವಾಗಿಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ದಳಪತಿ ವಿಜಯ್​​ಗೆ ಮತ್ತೊಂದು ಶಾಕ್; ಕಟ್ಟಬೇಕಿದೆ ಒಂದೂವರೆ ಕೊಟಿ ರೂ. ದಂಡ

ಎಚ್ ವಿನೋತ್ ನಿರ್ದೇಶನದ ‘ಜನ ನಾಯಗನ್’ ಸಿನಿಮಾ ಪಕ್ಕಾ ಪೊಲಿಟಿಕಲ್ ಆಕ್ಷನ್ ಥ್ರಿಲ್ಲರ್ ಎನ್ನಲಾಗಿದೆ. ಈ ಸಿನಿಮಾ ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆಗಿದ್ದರೂ ಸಹ ಕೆಲವು ಹೆಚ್ಚುವರಿ ಅಂಶಗಳನ್ನು ಸಿನಿಮಾಕ್ಕೆ ಸೇರಿಸಲಾಗಿದೆ. ವಿಜಯ್ ಈಗಾಗಲೇ ತಮ್ಮ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಮೂಲಕ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿರುವುದರಿಂದ, ಈ ಸಿನಿಮಾದ ಕಥೆ ಮತ್ತು ಸಂಭಾಷಣೆಗಳು ಅವರ ರಾಜಕೀಯ ಹಾದಿಗೆ ಪೂರಕವಾಗಿವೆ, ತಮ್ಮ ರಾಜಕೀಯ ಪಕ್ಷದ ಅಜೆಂಡದ ಪ್ರಚಾರಕ್ಕೆ ಈ ಸಿನಿಮಾವನ್ನು ವಿಜಯ್ ಬಳಸಿಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದೇ ಕಾರಣಕ್ಕೆ ರಾಜಕೀಯ ಎದುರಾಳಿಗಳು, ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗದಂತೆ ಪ್ರಭಾವ ಬಳಸಿ ತಡೆ ಹಿಡಿದಿದ್ದಾರೆ.

‘ಜನ ನಾಯಗನ್’ ನಟನಾಗಿ ವಿಜಯ್ ಅವರ 69ನೇ ಹಾಗೂ ಅಂತಿಮ ಚಿತ್ರ. ಈ ಸಿನಿಮಾನಲ್ಲಿ ಬಾಬಿ ಡಿಯೋಲ್ ವಿಲನ್. ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರ ಜೊತೆಗೆ ಮಲಯಾಳಂ ನಟಿ ಮಮಿತಾ ಬಿಜು ಸಹ ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಸಂಗೀತ ನೀಡಿರುವುದು ಅನಿರುದ್ಧ್ ರವಿಚಂದ್ರನ್. ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡದೇ ಇರುವ ಬಗ್ಗೆ ನಿರ್ಮಾಪಕರು ಸಲ್ಲಿಸಿರುವ ಆಕ್ಷೇಪದ ವಿಚಾರಣೆ ಪ್ರಸ್ತುತ ಹೈಕೋರ್ಟ್​​ನಲ್ಲಿ ಚಾಲ್ತಿಯಲ್ಲಿದೆ. ಇದರ ನಡುವೆ ಸಿನಿಮಾವನ್ನು ಸಿಬಿಎಫ್​​ಸಿಯ ರಿವ್ಯೂ ಕಮಿಟಿಗೆ ಕಳಿಸಲಾಗಿದೆ. ಆದರೆ ರಿವ್ಯೂ ಕಮಿಟಿಯವರು ಇನ್ನೂ ಯಾವುದೇ ನಿರ್ಣಯ ಕೈಗೊಂಡಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *