ರಾಜಸ್ಥಾನ, ಆ.10 : ಮನೆಯವರಿಗೆ ತಿಳಿಸದೆ, ಕಷ್ಟಪಟ್ಟು ಸಂಪಾದಿಸಿದ 5 ಲಕ್ಷ ರೂಪಾಯಿ ಹಣವನ್ನು ಜಮೀನಿನಲ್ಲಿ ಹೂತುಹಾಕಿದ್ದ ರೈತನೊಬ್ಬನಿಗೆ ಈಗ ಭಾರೀ ಆಘಾತ ಎದುರಾಗಿದೆ. ಜಮೀನಿನ ಅಡಿಯಲ್ಲಿ ಮುಚ್ಚಿಟ್ಟಿದ್ದ ಸಂಪೂರ್ಣ ಹಣವನ್ನು ಗೆದ್ದಲುಗಳು ತಿಂದಿದ್ದು (Termites), ಹಣವೆಲ್ಲ ಸಂಪೂರ್ಣ ಹಾಳಾಗಿ ಹೋಗಿದೆ. ರಾಜಸ್ಥಾನದ ಬಾಲೋತ್ರಾ ಜಿಲ್ಲೆಯ ಪಚಪದ್ರಾ ನಿವಾಸಿ ರಂಗು ಅಲಿಯಾಸ್ ಮಾಂಗಿಲಾಲ್ ಮೇಘವಾಲ್ ಎಂಬ ರೈತನ ಗದ್ದೆಯಲ್ಲಿ ನಡೆದಿದೆ.
ಜಮೀನಿನಲ್ಲಿ ಶೆಡ್ ನಿರ್ಮಿಸಲು ಮಾಂಗಿಲಾಲ್ 5 ಲಕ್ಷ ರೂಪಾಯಿ ನಗದನ್ನು ಕಾಯ್ದಿರಿಸಿದ್ದರು. ಮನೆಯಲ್ಲಿಟ್ಟರೆ ಕಳುವಾಗಬಹುದು ಅಥವಾ ಮನೆಯವರು ಖರ್ಚು ಮಾಡಬಹುದು ಎಂಬ ಭಯದಿಂದ, ಯಾರಿಗೂ ತಿಳಿಸದೆ ರಾತ್ರೋರಾತ್ರಿ ಪ್ಲಾಸ್ಟಿಕ್ ಚೀಲದಲ್ಲಿ ಹಣ ಸುತ್ತಿ ಜಮೀನಿನಲ್ಲಿ ಹೂತುಹಾಕಿದ್ದರು.
ಮಾಂಗಿಲಾಲ್ ಅವರಿಗೆ ಮರೆವಿನ ಕಾಯಿಲೆ ಇತ್ತು. ಹಣದ ಅಗತ್ಯ ಬಿದ್ದಾಗ, ಜಮೀನಿನಲ್ಲಿ ಎಲ್ಲಿ ಹೂತುಹಾಕಿದ್ದೇನೆ ಎಂಬುದನ್ನೇ ಅವರು ಮರೆತುಹೋದರು. 10 ಬಿಘಾ ಜಮೀನನ್ನು ಎಷ್ಟೇ ಅಗೆದು ಹುಡುಕಿದರೂ ಹಣ ಸಿಗಲಿಲ್ಲ. ನಂತರ ಕುಟುಂಬದವರಿಗೂ ವಿಷಯ ತಿಳಿಸಿ ಎಲ್ಲರೂ ಹುಡುಕಿದರೂ ಪತ್ತೆಯಾಗಲಿಲ್ಲ.
ಇಲ್ಲಿದೆ ನೋಡಿ ವಿಡಿಯೋ:
जमीन में पैसे कौन दबाता है इस किसान ने अपना प्लोट बेचकर चोरी के डर से 5 लाख रूपये ज़मीन में दबा दिए।
कुछ दिन बाद पैसे निकाले सारे पैसे दिमाक खा गई और बड़ा नुक्सान उठाना पड़ा। pic.twitter.com/ByAvdK8BH3
— 𝗠𝗮𝗿𝗶𝘆𝗮𝗺_𝗠𝗕𝗗 (@Mariyam_MBD) August 9, 2026
ಇತ್ತೀಚೆಗೆ ಮಳೆಗಾಲದ ಹಿನ್ನೆಲೆಯಲ್ಲಿ ಜಮೀನನ್ನು ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡುವಾಗ ಪ್ಲಾಸ್ಟಿಕ್ ಚೀಲ ಮೇಲಕ್ಕೆ ಬಂದಿದೆ. ಮರುದಿನ ಬೆಳಿಗ್ಗೆ ಜಮೀನಿಗೆ ಹೋದಾಗ ಪ್ಲಾಸ್ಟಿಕ್ ಬ್ಯಾಗ್ ಸಿಕ್ಕಿದ್ದು, ಅದನ್ನು ತೆರೆದು ನೋಡಿದಾಗ ಒಳಗಿದ್ದ 5 ಲಕ್ಷ ರೂ. ಮೌಲ್ಯದ ನೋಟುಗಳನ್ನು ಗೆದ್ದಲುಗಳು ಸಂಪೂರ್ಣವಾಗಿ ತಿಂದಿರುವುದು ಕಂಡುಬಂದಿದೆ.
ಸಂಪೂರ್ಣ ಹಾಳಾಗಿದ್ದ ನೋಟುಗಳನ್ನು ತೆಗೆದುಕೊಂಡು ಕುಟುಂಬಸ್ಥರು ಪಚಪದ್ರಾ ಎಸ್ಬಿಐ (SBI) ಶಾಖೆಗೆ ಹಾಗೂ ನಂತರ ಬಾಲೋತ್ರಾದ ಮುಖ್ಯ ಶಾಖೆಗೆ ತೆರಳಿದರು. ಆದರೆ, ನೋಟುಗಳ ಸ್ಥಿತಿ ತೀರಾ ಕೆಟ್ಟದಾಗಿದ್ದರಿಂದ ಸ್ಥಳೀಯ ಬ್ಯಾಂಕ್ಗಳು ಅವುಗಳನ್ನು ಸ್ವೀಕರಿಸಲು ನಿರಾಕರಿಸಿವೆ.
ಇದನ್ನೂ ಓದಿ: 90ರ ದಶಕದ ಕರಾಳ ಕಾಶ್ಮೀರಿ ಉಗ್ರ ಇತಿಹಾಸ ಮರುಕಳಿಸುತ್ತಿದೆಯೇ? ಪಂಡಿತರಿಗೆ ಶುರುವಾಗಿವೆ ಉಗ್ರ ಬೆದರಿಕೆಗಳು
ಜೈಪುರದಲ್ಲಿರುವ ರಿಸರ್ವ್ ಬ್ಯಾಂಕ್ (RBI) ಅಥವಾ ಎಸ್ಬಿಐ ಮುಖ್ಯ ಕಚೇರಿಗೆ ತೆರಳಿದರೆ ಪರಿ ಪರಿಶೀಲನೆ ನಡೆಸಿ ಬದಲಾಯಿಸಿಕೊಳ್ಳಬಹುದು ಎಂದು ಬ್ಯಾಂಕ್ ಸಿಬ್ಬಂದಿ ಸಲಹೆ ನೀಡಿದ್ದಾರೆ. ಆದರೆ ತೀವ್ರ ಬಡತನದಲ್ಲಿರುವ ಕುಟುಂಬಕ್ಕೆ ಜೈಪುರಕ್ಕೆ ಪ್ರಯಾಣಿಸಲು ಸಾಲದ ಹಣವೂ ಇಲ್ಲದೆ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
